Ramesh Jarakiholi met Santhoshji at BJP Office | ಬಿ.ಎಲ್.ಸಂತೋಷ್ ಜೊತೆ ರಮೇಶ್ ಜಾರಕಿಹೊಳಿ ಚರ್ಚೆ: ರಾಜ್ಯ ರಾಜಕೀಯದಲ್ಲಿ ಬದಲಾವಣೆಯ ಗಾಳಿ?



ನವದೆಹಲಿ: ರಾಜ್ಯ ರಾಜಕೀಯದಲ್ಲಿ ಬದಲಾವಣೆಯ ಗಾಳಿ ಬೀಸಲಾರಂಭಿಸಿದೆ. 


ನವದೆಹಲಿಯಲ್ಲಿ ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರನ್ನು ರಾಜ್ಯದ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಭೇಟಿಮಾಡಿ ಸಮಾಲೋಚನೆ ನಡೆಸಿದರು.




ಉಭಯ ನಾಯಕರು ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಸಮಾಲೋಚನೆ ನಡೆಸಿದರು ಎಂದು ಹೇಳಲಾಗಿದೆ. ಇದರ ಜೊತೆಗೆ ಕಳೆದ ಆರು ತಿಂಗಳಿನಲ್ಲಿ ಜಲಸಂಪನ್ಮೂಲ ಇಲಾಖೆಯಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳ ಕುರಿತು ಬಿ ಎಲ್ ಸಂತೋಷ್ ಜಿ ಅವರಿಗೆ ವಿವರಿಸಿದರು.

BREAKING NEWS
Loading latest news...
Join our WhatsApp Channel Powered By : Online Pudu