-->

Bantwal-Ramanatha-Rai | ಬಂಟ್ವಾಳ: ಬಾಂಬಿಲ ಪದವು ಮೂವ ಕಾಂಕ್ರೀಟ್ ರಸ್ತೆಗೆ ಮಾಜಿ ಸಚಿವ ರಮಾನಾಥ ರೈ ಚಾಲನೆ

Bantwal-Ramanatha-Rai | ಬಂಟ್ವಾಳ: ಬಾಂಬಿಲ ಪದವು ಮೂವ ಕಾಂಕ್ರೀಟ್ ರಸ್ತೆಗೆ ಮಾಜಿ ಸಚಿವ ರಮಾನಾಥ ರೈ ಚಾಲನೆ



ಬಂಟ್ವಾಳ: ತಾಲೂಕಿನ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ 2017-18 ಸಾಲಿನ ಕ್ರಿಯಾ ಯೋಜನೆಯಲ್ಲಿ ಬಂಬಿಲ ಪದವು ಮೂವ ರಸ್ತೆ ಕಾಂಕ್ರಿಟೀಕರಣಕ್ಕೆ ಮಾಜಿ ಸಚಿವರು ಮತ್ತು ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ಮಲ್ಲಿಕಾ ವಿ ಶೆಟ್ಟಿ ಇವರ 20 ಲಕ್ಷ ಅನುದಾನದ ಕಾಂಕ್ರೆಟ್ ರಸ್ತೆಯ ಉದ್ಘಾಟನೆಯನ್ನು ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ರಮಾನಾಥ ರೈ ಯವರು ನೆರೆವೇರಿಸಿದರು.


ಈ ಸಂದರ್ಭದಲ್ಲಿ ಬಾಂಬಿಲ ಚರ್ಚ್ ಧರ್ಮಗುರುಗಳಾದ ಪೀಠರ್ ಗೋನ್ಸಾಲ್ವಿಸ್,ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾದ ಮಲ್ಲಿಕಾ ವಿ ಶೆಟ್ಟಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್ ಹಾಗೂ ಸ್ಥಳೀಯ ನಾಗರೀಕರು ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article