-->

World Bunt Sangha Social Welfare Program | ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಬೃಹತ್ ಸಮಾಜ ಕಲ್ಯಾಣ ನೆರವು ವಿತರಣೆ ಕಾರ್ಯಕ್ರಮ

World Bunt Sangha Social Welfare Program | ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಬೃಹತ್ ಸಮಾಜ ಕಲ್ಯಾಣ ನೆರವು ವಿತರಣೆ ಕಾರ್ಯಕ್ರಮ





ಮಂಗಳೂರು, emungaru report: ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಡಿ.1ರಂದು ಬಂಟ್ಸ್ ಹಾಸ್ಟೇಲಿನ ಶ್ರೀಮತಿ ಗೀತಾ ಎಸ್.ಎಂ ಶೆಟ್ಟಿ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ವೈದ್ಯಕೀಯ, ವಸತಿ ಹಾಗೂ ಬಡ ಹೆಣ್ಣಮಕ್ಕಳ ಮದುವೆಗೆ ಆರ್ಥಿಕ ನೆರವು ವಿತರಣೆಯ ಕಾರ್ಯಕ್ರಮವು ನಡೆಯಿತು.



emungaru report ಬೃಹತ್ ಸಮಾಜ ಕಲ್ಯಾಣ ನೆರವು ವಿತರಣೆ ಕಾರ್ಯಕ್ರಮವನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನಿರ್ದೇಶಕ ಕೆ.ಎಂ. ಶೆಟ್ಟಿ ಅವರು ಪಿಂಗಾರ ಬಿಡಿಸುವ ಮೂಲಕ ಸಾಂಪ್ರದಾಯಿಕ ಶೈಲಿಯಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.






ಜಾಗತಿಕ ಬಂಟರ ಸಂಘದ ವಿವಿಧ ತಂಗಳರು ಬಡವರ ಕಣ್ಣೀರನ್ನು ಒರೆಸುವ ಮಹತ್ವಪೂರ್ಣ ಕಾರ್ಯವನ್ನು ಮಾಡುತ್ತಿದ್ದು ಅವರ ಕಾರ್ಯಕ್ಕೆ ಭಗವಂತ ಮತ್ತಷ್ತು ಹೆಚ್ಚಿನ ಶಕ್ತಿ ತುಂಬಲಿ ಎಂದು ಹಾರೈಸಿದರು.



emungaru report ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಮಾಲಾಡಿ ಅಜಿತ್ ಕುಮಾರ್ ರೈ ಅವರು ಕಾರ್ಯಕ್ರಮದ ದೀಪ ಬೆಳಗಿಸಿ ಮಾತನಾಡಿದರು. 111 ವರ್ಷಗಳ ಭವ್ಯ ಇತಿಹಾಸ ಇರುವ ಬಂಟರ ಸಂಘವನ್ನು ಕಟ್ಟಿದ ಅಂದಿನ ಹಿರಿಯರ ದಾರಿಯಲ್ಲಿ ಐಕಳ ಅವರು ನಡೆಯುತ್ತಿರುವುದು ಮೆಚ್ಚುಗೆಯ ವಿಷಯ ಎಂದು ಶ್ಲಾಘಿಸಿದರು.




ಒಕ್ಕೂಟವು ನಿಮ್ಮೊಂದಿಗೆ ನಾವಿದ್ದೇವೆ ಎಂಬ ಭರವಸೆ ಮೂಡಿಸುವ ಉದ್ದೇಶದಿಂದ ವಿದ್ಯಾರ್ಥಿಗಳಿಗೆ ಸಹಾಯಹಸ್ತ ನೀಡುತ್ತಿದ್ದು ವಿದ್ಯಾರ್ಥಿಗಳು ಈ ಸಹಾಯವನ್ನು ಸದುಪಯೋಗಪಡಿಸಿ ಉತ್ತಮ ನಾಗರಿಕರಾಗಿ ಸಮಾಜವನ್ನು ಮರೆಯದೆ ಬಾಳಿರಿ ಎಂದು ಆಶಯ ವ್ಯಕ್ತಪಡಿಸಿದರು.


ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಶ್ರೀ ಲಿಂಗಪ್ಪ ಸೇರಿಗಾರ್ ಕಟೀಲು ದಂಪತಿಯನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
















emungaru report | ಹಾಗೆಯೇ, ಪ್ರತಿಷ್ಠಿತ ಮುಖ್ಯಮಂತ್ರಿಗಳ ಚಿನ್ನದ ಪದಕ ಪಡೆದ ಪೊಲೀಸ್ ಸಿಬ್ಬಂದಿ ಗೋಪಾಲಕೃಷ್ಣ, ಅಕ್ಷತಾ ವಿ. ಶೆಟ್ಟಿ ಅವರನ್ನೂ ಸನ್ಮಾನಿಸಲಾಯಿತು.




ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸುರತ್ಕಲ್ ಬಂಟರ ಸಂಘವನ್ನು ಪ್ರತಿನಿಧಿಸಿ ಅದರ ಅಧ್ಯಕ್ಷರಾದ ಸುಧಾಕರ ಪೂಂಜ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮೈಮೂನ ಫೌಂಡೇಶನಿನ ಸಮಾಜಸೇವಕ ಅಸೀಫ್ ಅಪತ್ಬಾಂದವ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು. ವೆನ್ಲಾಕ್ ಆಸ್ಪತ್ರೆಯಲ್ಲಿ ಬಡರೋಗಿಗಳ ಪ್ರತಿದಿನ ಊಟ ವಿತರಣೆ ಮಾಡುವ ಎಂ. ಫ್ರೆಂಡ್ಸ್ "ಕಾರುಣ್ಯ" ತಂಡಕ್ಕೆ ಒಂದು ತಿಂಗಳ ಆರ್ಥಿಕ ಸಹಾಯ ನೀಡಲಾಯಿತು.



emungaru report | ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನುವಹಿಸಿದ್ದರು. ಅವರು ಮಾತನಾಡಿ, ಬಂಟ ಸಮುದಾಯದ ಮಂದಿ ಎಲ್ಲಾ ಸಮಾಜವನ್ನು ಸೌಹಾರ್ದದಿಂದ ನೋಡಿ ಮಾನವೀಯತೆಯಿಂದ ಪ್ರೀತಿಸಿದವರು. ಮಾನವ ಜಾತಿಯಲ್ಲಿ ಎಲ್ಲರೂ ಒಂದೇ ಎಂಬ ದೃಷ್ಟಿಯಲ್ಲಿ ಎಲ್ಲಾ ಸಮಾಜದ ಆಶಕ್ತರಿಗೂ ಸಹಾಯ ಮಾಡಲಾಗಿದೆ. ಅಷ್ಟೇ ಅಲ್ಲ, ಇತರ ಸಮಾಜದಲ್ಲಿ ಸಾಮಾಜಿಕವಾಗಿ ಸಹಾಯ ಮಾಡಿದ ಸಾಧಕರನ್ನು ಗುರುತಿಸಿ ಸನ್ಮಾನ ಮಾಡಿ ಗೌರವಿಸಲಾಗಿದೆ. ಇಂದು ಕಟೀಲು ಕ್ಷೇತ್ರದಲ್ಲಿ 40 ವರ್ಷಗಳ ಕಾಲ ಸೇವೆ ಸಲ್ಲಿಸಿದ ಲಿಂಗಪ್ಪ ಶೇರಿಗಾರ ಹಾಗೂ ಸಮಾಜಸೇವಕ ಆಸಿಫ್ ಅಪತ್ಬಾಂದವ ಅವರನ್ನು ಗುರುತಿಸಿ ಸನ್ಮಾನಿದ್ದೇವೆ ಎಂದು ಹೇಳಿದರು. 



Ads on article

Advertise in articles 1

advertising articles 2

Advertise under the article