-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
Shocking news to Police Department | ಪೊಲೀಸ್ ಇಲಾಖೆಗೆ ಮತ್ತೊಂದು ಶಾಕ್| ಮಂಗಳೂರಿನ ಪೊಲೀಸ್ ಸಿಬ್ಬಂದಿ ಇದ್ದಕ್ಕಿದ್ದಂತೆ ನಾಪತ್ತೆ!

Shocking news to Police Department | ಪೊಲೀಸ್ ಇಲಾಖೆಗೆ ಮತ್ತೊಂದು ಶಾಕ್| ಮಂಗಳೂರಿನ ಪೊಲೀಸ್ ಸಿಬ್ಬಂದಿ ಇದ್ದಕ್ಕಿದ್ದಂತೆ ನಾಪತ್ತೆ!





ಮಂಗಳೂರು: ರಾಜ್ಯ ಪೊಲೀಸ್ ಇಲಾಖೆಗೆ ಇನ್ನೊಂದು ಕೆಟ್ಟ ಸುದ್ದಿ. ಮಂಗಳೂರಿನ ಪೊಲೀಸ್ ಸಿಬ್ಬಂದಿಯೊಬ್ಬರು ಇದ್ದಕ್ಕಿದ್ದಂತೆ ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದಾರೆ. ಅವರ ನಾಪತ್ತೆ ಪ್ರಕರಣ ಪೊಲೀಸ್ ಇಲಾಖೆಗೆ ಮತ್ತೊಂದು ತಲೆನೋವಾಗಿ ಪರಿಣಮಿಸಿದೆ.



ಮಂಗಳೂರು ಕೊಣಾಜೆ ಪೊಲೀಸ್ ಠಾಣೆಯ ಕಾನ್ಸ್‌ಟೆಬಲ್ 29 ವರ್ಷದ ಅನಿಲ್ ಕುಮಾರ್ ನಾಪತ್ತೆಯಾಗಿದ್ದು ಇಲಾಖೆಗೆ ತಲೆನೋವಾಗಿದೆ.



ಅಸೈಗೋಳಿಯ ಪೊಲೀಸ್ ಗೃಹದಿಂದ ಇವರು ನಿಗೂಢವಾಗಿ ಕಣ್ಮರೆಯಾಗಿದ್ಧಾರೆ. ಈ ಬಗ್ಗೆ ಪೊಲೀಸ್ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.



ಚಿಕ್ಕಮಗಳೂರು ಜಿಲ್ಲೆಯವರಾದ ಅನಿಲ್ ತಮ್ಮ ತಾಯಿ, ಪತ್ನಿ ಮತ್ತು ಪುತ್ರನೊಂದಿಗೆ ಅಸೈಗೋಳಿ ಪೊಲೀಸ್ ವಸತಿಗೃಹದಲ್ಲಿ ವಾಸವಾಗಿದ್ದರು.



ಬುಧವಾರ ಸಂಜೆಯಿಂದ ಅವರು ತಮ್ಮ ಸಹೋದ್ಯೋಗಿಗಳಿಗೆ ಮತ್ತು ಮೇಲಾಧಿಕಾರಿಗಳಿಗೆ ವಾಟ್ಸ್ ಆಪ್ ಸಂದೇಶ ಕಳುಹಿಸಿ ನಾಪತ್ತೆಯಾಗಿದ್ದಾರೆ.

ಕೌಟುಂಬಿಕ ವಿಚಾರದಲ್ಲಿ ತಾವು ಮನನೊಂದು ಕಠಿಣ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂಬರ್ಥದ ಸಂದೇಶವನ್ನು ಅನಿಲ್ ಸ್ನೇಹಿತರೊಂದಿಗೆ ಹಂಚಿಕೊಂಡಿದ್ದಾರೆ. 


ತನ್ನ ಪತ್ನಿಯು ಮನೆಯಲ್ಲಿ ಹಿರಿಯರೊಂದಿಗೆ ಜಗಳವಾಡಿ ತವರು ಮನೆ ಸೇರಿದ್ದು ಅನಿಲ್ ಅವರನ್ನು ಅತೀವವಾಗಿ ನೋವು ತರುವಂತೆ ಮಾಡಿತ್ತು ಎನ್ನಲಾಗಿದೆ. ತಾನು ಗಂಡನ ಜೊತೆ ಬರುವುದಿಲ್ಲ ಎಂದು ಖಡಕ್ ಆಗಿ ಪತ್ನಿ ಹೇಳಿರುವುದು ಕೋಮಲ ಹೃದಯದ ಅನಿಲ್ ಅವರ ಮನಸ್ಸಿಗೆ ಘಾಸಿಯಾಗುವಂತೆ ಮಾಡಿದೆ ಎಂಬುದು ಸ್ನೇಹಿತರ ಮಾತು.



ಎರಡು ದಿನಗಳಿಂದ ಅವರು ಎಲ್ಲಿದ್ದಾರೆ ಎಂಬುದು ಯಾರಿಗೂ ತಿಳಿದಿಲ್ಲ. ಕಠಿಣ ನಿರ್ಧಾರ ತೆಗೆದುಕೊಳ್ಳದಿರಲಿ, ಅವರು ವಾಪಸಾಗಲಿ ಎಂಬುದು ಎಲ್ಲರ ಹಾರೈಕೆ.

Ads on article

Advertise in articles 1

advertising articles 2

Advertise under the article

ಸುರ