-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
Rapist bail rejected | 'ನಟಿ ಮಾಡುತ್ತೇನೆ, ಧಾರಾವಾಹಿಯಲ್ಲಿ ಅವಕಾಶ ಕೊಡ್ತೇನೆ': ನಿರ್ಮಾಪಕ ಎಂದು ನಂಬಿಸಿ ಅಪ್ರಾಪ್ತೆ ಮೇಲೆ ಲೈಂಗಿಕ ಕಿರಕುಳ

Rapist bail rejected | 'ನಟಿ ಮಾಡುತ್ತೇನೆ, ಧಾರಾವಾಹಿಯಲ್ಲಿ ಅವಕಾಶ ಕೊಡ್ತೇನೆ': ನಿರ್ಮಾಪಕ ಎಂದು ನಂಬಿಸಿ ಅಪ್ರಾಪ್ತೆ ಮೇಲೆ ಲೈಂಗಿಕ ಕಿರಕುಳ




ಕಿರುತೆರೆ ಟಿ.ವಿ. ಧಾರಾವಾಹಿಯಲ್ಲಿ ಅವಕಾಶ ಕೊಡಿಸುತ್ತೇನೆ ಎಂದು ವಂಚಿಸಿ ನಟಿಯೊಬ್ಬಳ ಮೇಲೆ ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರ ನಡೆಸಿದ ಘಟನೆ ನಡೆದಿದೆ.



ಹಾಸನದ ಅಪ್ರಾಪ್ತ ವಯಸ್ಕ ಯುವತಿಯನ್ನು ತಾನು ನಿರ್ಮಾಪಕ ಎಂದು ನಂಬಿಸಿ, ಟಿವಿ ಧಾರಾವಾಹಿಯಲ್ಲಿ ನಟಿ ಮಾಡುತ್ತೇನೆ ಎಂದು ನಂಬಿಸಿ ಆನಂದ್ ಎಂಬಾತ ಬೆಂಗಳೂರಿಗೆ ಕರೆ ತಂದಿದ್ದ.



ಅಲ್ಲಿ ಆಕೆಯನ್ನು ಲಾಡ್ಜ್‌ವೊಂದರಲ್ಲಿ ಇರಿಸಿ ಲೈಂಗಿಕ ಕಿರುಕುಳ ನೀಡಿದ್ದ. ಅಲ್ಲದೆ ಅತ್ಯಾಚಾರವನ್ನೂ ನಡೆಸಿದ್ದ. ಈ ಬಗ್ಗೆ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದಳು.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಲಯ, ಆರೋಪಿಗೆ ಜಾಮೀನು ನೀಡಲು ನಿರಾಕರಿಸಿದೆ.



ಆರೋಪಿ ಆನಂದ ಅಪ್ರಾಪ್ತ ವಯಸ್ಸಿನ ಹೆಣ್ಣು ಮಗಳನ್ನು ವಂಚಿಸಿ ಮೋಸ ಮಾಡಿದ್ದಾನೆ. ಅಲ್ಲದೆ, ದೈಹಿಕ ಸಂಪರ್ಕವನ್ನೂ ಬೆಳೆಸಿದ್ದಾನೆ. ಇದೊಂದು ಪ್ರೇಮ ಪ್ರಕರಣ ಎಂದು ಪರಿಗಣಿಸಲು ಸಾಧ್ಯವಿಲ್ಲ. ಇದು ಅಮಾಯಕಳನ್ನು ಲೈಂಗಿಕವಾಗಿ ಅತ್ಯಾಚಾರ ಮಾಡಿದ ಪ್ರಕರಣ ಜೊತೆಗೆ ವಂಚನೆ ಪ್ರಕರಣವೂ ಆಗಿದೆ. ಆದ್ದರಿಂದ ಜಾಮೀನು ನೀಡಲು ಯಾವುದೇ ಸಕಾರಣ ಇಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.



ಮಗಳು ಕಾಣೆಯಾಗಿದ್ದಾಳೆ ಎಂದು ಬಾಲಕಿಯ ತಾಯಿ 2020ರ ಮಾರ್ಚ್ 6ರಂದು ಹಾಸನ ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನಲ್ಲಿ ಆನಂದ್ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದರು. 

Ads on article

Advertise in articles 1

advertising articles 2

Advertise under the article

ಸುರ