-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
Muslim Youth attacked | ಮಂಗಳೂರು: ಯುವಕನ ಮೇಲೆ ತಲವಾರ್ ದಾಳಿ, ಆರೋಪಿಗಳು ಪರಾರಿ

Muslim Youth attacked | ಮಂಗಳೂರು: ಯುವಕನ ಮೇಲೆ ತಲವಾರ್ ದಾಳಿ, ಆರೋಪಿಗಳು ಪರಾರಿ





ಮಂಗಳೂರು: ಮಂಗಳೂರು ಹೊರ ವಲಯದ ಅಡ್ಡೂರು ಎಂಬಲ್ಲಿ ಯುವಕನೊಬ್ಬನ ಮೇಲೆ ದುಷ್ಕರ್ಮಿಗಳ ತಂಡ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಡೆದಿದೆ. ಘಟನೆಯ ಬಳಿಕ ಆರೋಪಿಗಳು ಪರಾರಿಯಾಗಿದ್ದು, ಯುವಕನನ್ನು ಮಂಗಳೂರಿನ ಸರ್ಕಾರಿ ವೆನ್‌ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.



ಗಾಯಗೊಂಡಿರುವ ಯುವಕನನ್ನು ಅಡ್ಡೂರು ಗ್ರಾಮದ ನಿವಾಸಿ 30 ವರ್ಷದ ಮೊಹಮ್ಮದ್ ತಾಜುದ್ದೀನ್ ಎಂದು ಗುರ್ತಿಸಲಾಗಿದೆ. ಹಳೆ ದ್ವೇಷವೇ ಈ ಕೃತ್ಯಕ್ಕೆ ಕಾರಣ ಎಂದು ಶಂಕಿಸಲಾಗಿದೆ.



ತಾಜುದ್ದೀನ್ ಅವರ ತೊಡೆ ಭಾಗ, ಕೈ ಹಾಗೂ ದೇಹದ ಇತರ ಕಡೆಗಳಲ್ಲಿ ಗಾಯಗಳಾಗಿವೆ. ಮೂವರು ದುಷ್ಕರ್ಮಿಗಳ ಗುಂಪು ಈ ಕೃತ್ಯವೆಸಗಿ ಪರಾರಿಯಾಗಿದೆ. ಗಾಯಗೊಂಡವರನ್ನು ಗುರುತಿಸಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ.


 ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Ads on article

Advertise in articles 1

advertising articles 2

Advertise under the article

ಸುರ