-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
miscrents set fire to beef stall set fire at Mangaluru | ತಾತ್ಕಾಲಿಕ ಬೀಫ್ ಸ್ಟಾಲ್‌ಗೆ ಬೆಂಕಿ: ತೊಕ್ಕೊಟ್ಟಿನಲ್ಲಿ ಕಿಡಿಗೇಡಿಗಳ ಕೃತ್ಯ

miscrents set fire to beef stall set fire at Mangaluru | ತಾತ್ಕಾಲಿಕ ಬೀಫ್ ಸ್ಟಾಲ್‌ಗೆ ಬೆಂಕಿ: ತೊಕ್ಕೊಟ್ಟಿನಲ್ಲಿ ಕಿಡಿಗೇಡಿಗಳ ಕೃತ್ಯ




ಮಂಗಳೂರು: ತೊಕ್ಕೊಟ್ಟು ಒಳಪೇಟೆಯಲ್ಲಿ ತಾತ್ಕಾಲಿಕವಾಗಿ ಮಾಡಲಾದ ಶೆಡ್‌ನಲ್ಲಿ ನಡೆಯುತ್ತಿದ್ದ ಬೀಫ್‌ ಸ್ಟಾಲ್‌ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಕಳೆದ ರಾತ್ರಿ ಈ ಘಟನೆ ನಡೆದಿದ್ದು, ಇಂದು ಬೆಳಿಗ್ಗೆ ಅಂಗಡಿ ಸುಟ್ಟು ಕರಕಲಾದ ಸ್ಥಿತಿಯಲ್ಲಿದೆ.



ತೊಕ್ಕೊಟ್ಟು ಒಳಪೇಟೆಯ ಮಾರುಕಟ್ಟೆಯನ್ನು ನೂತನವಾಗಿ ನಿರ್ಮಿಸುವ ಸಲುವಾಗಿ ಕೆಡವಲಾಗಿತ್ತು. ಮಾರುಕಟ್ಟೆಯ ಅಂಗಡಿಗಳನ್ನು ತಾತ್ಕಾಲಿಕವಾಗಿ ನಡೆಸಲು ಅವಕಾಶ ನೀಡಲಾಗಿತ್ತು. ಅದೇ ರೀತಿ, ಬೀಫ್ ಸ್ಟಾಲ್‌ನ್ನು ರೈಲ್ವೇ ಹಳಿ ಬದಿಯಲ್ಲಿ ಶೆಡ್‌ವೊಂದರಲ್ಲಿ ನಡೆಸಲಾಗುತ್ತಿತ್ತು.



ಈ ಸ್ಟಾಲ್‌ಗಳನ್ನು ಮುಚ್ಚುವಂತೆ ಕೆಲವು ಸಂಘಟನೆಗಳು ಉಳ್ಳಾಲ ನಗರಸಭೆಗೆ ಮನವಿ ಸಲ್ಲಿಸಿತ್ತು. ಈ ನಡುವೆ ಭೀಫ್‌ ಸ್ಟಾಲ್‌ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಘಟನೆ ವರದಿಯಾಗಿದೆ.

ಉಳ್ಳಾಲ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ಮಾಡಿದ್ದಾರೆ.


Ads on article

Advertise in articles 1

advertising articles 2

Advertise under the article

ಸುರ