-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
EXCLUSIVE- Smart City Project | ಸ್ಮಾರ್ಟ್ ಸಿಟಿ ಕಾಮಗಾರಿ ಗುಣಮಟ್ಟ ಬಟಾಬಯಲು: ಎರಡೇ ವಾರದಲ್ಲಿ ವ್ಯಕ್ತಿಯ ಸೊಂಟ ಮುರಿದ ಫುಟ್‌ಪಾತ್

EXCLUSIVE- Smart City Project | ಸ್ಮಾರ್ಟ್ ಸಿಟಿ ಕಾಮಗಾರಿ ಗುಣಮಟ್ಟ ಬಟಾಬಯಲು: ಎರಡೇ ವಾರದಲ್ಲಿ ವ್ಯಕ್ತಿಯ ಸೊಂಟ ಮುರಿದ ಫುಟ್‌ಪಾತ್





ಮಂಗಳೂರು: ನಗರದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಭರ್ಜರಿಯಾಗಿ ನಡೆದಿತ್ತು. ನಗರದ ವಿವಿಧೆಡೆ ಕೋಟಿ ಕೋಟಿ ರೂಪಾಯಿ ವೆಚ್ಚದಲ್ಲಿ ನಡೆದಿದೆ. ಅಧಿಕಾರಿಗಳು ಮತ್ತು ರಾಜಕಾರಣಿಗಳ ಕೃಪಾಕಟಾಕ್ಷದಿಂದಲೇ ಈ ಕಾಮಗಾರಿ ನಡೆಯುತ್ತಿದೆ ಎಂಬುದು ಬೇರೆ ಹೇಳಬೇಕಾಗಿಲ್ಲ.



ಈಗ ಈ ಸರಣಿ ಕಾಮಗಾರಿಗಳ ಗುಣಮಟ್ಟದ ಪ್ರಶ್ನೆ ಎದ್ದಿದೆ. ಇದಕ್ಕೆ ಸಾಕ್ಷಿ ಎಂಬಂತೆ ನಗರದಲ್ಲಿ ಫುಟ್‌ಪಾತ್‌ವೊಂದು ಸ್ಮಾರ್ಟ್ ಸಿಟಿ ಕಾಮಗಾರಿಯ ಮಹಾಕಥೆಯನ್ನು ಸಾರಿ ಏಳುತ್ತಿದೆ.






ಮಂಗಳೂರಿನ ನಾಗರಿಕರು ಈ ಫುಟ್‌ಪಾತ್‌ನಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಬಿದ್ದು ಸೊಂಟ ಮುರಿದುಕೊಂಡಿದ್ದಾರೆ. ಅಧಿಕಾರಿಗಳು ಮತ್ತು ರಾಜಕಾರಣಿಗಳು ಎಷ್ಟು ಕಳಪೆ ಕಾಮಗಾರಿಗೆ ಕೃಪಾಶ್ರಯ ನೀಡಿದ್ದಾರೆ ಎಂಬುದು ಇದೀಗ ಜನಜನಿತವಾಗಿದೆ.



ಜನತೆ ನೀಡಿದ ತೆರಿಗೆ ಹಣ ಕೇಂದ್ರ ಸರ್ಕಾರದ ಅನುದಾನದ ರೂಪದಲ್ಲಿ ಕೋಟಿಗಟ್ಟಲೆ ಹರಿದುಬಂದು ರಾಜಕಾರಣಿಗಳು ಮತ್ತು ಅಧಿಕಾರಿಗಳ ಜೇಬಿಗೆ ಇಳಿದಿದೆ. ಸ್ಮಾರ್ಟ್ ಸಿಟಿ ಕಾಮಗಾರಿ ಎಂದು ಹೇಳಿ ಜನರಿಗೆ ಮಾತ್ರ ಪಂಗನಾಮ ಹಾಕಲಾಗಿದೆ.





ಇದೀಗ, ಸ್ಮಾರ್ಟ್ ಸಿಟಿಯ ಎಲ್ಲ ಕಾಮಗಾರಿ ಮತ್ತು ಅದರ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸಬೇಕಾಗಿದೆ. ಆದರೆ, ಬೆಕ್ಕಿನ ಕೊರಳಿಗೆ ಗಂಟೆ ಕಟ್ಟುವವರು ಯಾರು?

Ads on article

Advertise in articles 1

advertising articles 2

Advertise under the article

ಸುರ