-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
Corrupt Surveyor Arrested in Mangaluru |  30 ಸಾವಿರ ಲಂಚಕ್ಕೆ ಬೇಡಿಕೆ: ಮಂಗಳೂರಿನ ಭ್ರಷ್ಟ ಸರ್ವೇಯರ್ ಗಂಗಾಧರ ಅರೆಸ್ಟ್!

Corrupt Surveyor Arrested in Mangaluru | 30 ಸಾವಿರ ಲಂಚಕ್ಕೆ ಬೇಡಿಕೆ: ಮಂಗಳೂರಿನ ಭ್ರಷ್ಟ ಸರ್ವೇಯರ್ ಗಂಗಾಧರ ಅರೆಸ್ಟ್!




ಮಂಗಳೂರು ಎಸಿಬಿ ಯಶಸ್ವೀ ಕಾರ್ಯಾಚರಣೆ

ಉದ್ಯಮಿಯಿಂದ ಲಂಚ ಪಡೆದಾಗ ಸರ್ವೇಯರ್ ಬಂಧನ


ಬಹಳ ಸಮಯದಿಂದ ಮಂಗಳೂರಿನ ಜನರನ್ನು ಲಂಚದ ಹಣಕ್ಕಾಗಿ ಪೀಡಿಸುತ್ತಿದ್ದ ಮಂಗಳೂರು ನಗರ ಸರ್ವೇಯರ ( ಮಂಗಳೂರು ತಾಲೂಕಿನ ಪ್ರಭಾರ) ಗಂಗಾಧರ M ಇಂದು ಮಂಗಳೂರಿನ ಭ್ರಷ್ಟಾಚಾರ ನಿಗ್ರಹ ದಳ- ACB ಯ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ.


ಮಂಗಳೂರಿನ ನಗರದಲ್ಲಿ ನಾಗರೀಕರೋರ್ವರು ತಮ್ಮ ಕಛೇರಿಯ ಪೀಠೋಪಕರಣ ಮಾಡಿಸಲು ತಮ್ಮ ಮನೆಯ ಆವರಣದಲ್ಲಿ ಇದ್ದ ಸಾಗುವಾನಿ ಮರವನ್ನು ಕಡಿಯಲು ಅರಣ್ಯ ಇಲಾಖೆಗೆ single purmit ಅನುಮತಿಗಾಗಿ ಕೋರಿಕೆ ಪತ್ರ ಸಲ್ಲಿಸಿದ್ದರು, ಮಂಗಳೂರು ನಗರದ ಅರಣ್ಯ ಇಲಾಖೆ ಈ ಪತ್ರವನ್ನು ಕಂದಾಯ ಇಲಾಖೆಗೆ ಕಳಿಸಿತ್ತು.



ಆದರೆ, ಬರೋಬ್ಬರಿ ಒಂದು ತಿಂಗಳು ಕಳೆದರೂ ಸರ್ವೇಯರ್ ಗಂಗಾಧರ್ ಸ್ಥಳ ಪರಿಶೀಲನೆಗೆ ಬರಲೇ ಇಲ್ಲ. ಮತ್ತೆ ಸಂಪರ್ಕಿಸಿದಾಗ, ಅವರು ಈ ಕಾರ್ಯಕ್ಕೆ ಕನಿಷ್ಟ 3000 ರೂ. ಲಂಚ ನೀಡಬೇಕೆಂಬ ಬೇಡಿಕೆ ಇಟ್ಟರು.


ಈ ಪರ್ಮಿಟ್ ಗಾಗಿ ಕಂದಾಯ ಇಲಾಖೆಗೆ ಕಟ್ಟಬೇಕಾದ 600 ರೂಪಾಯಿ ಜೊತೆಯಲ್ಲಿ ಈತನಿಗೆ 3000 ರೂಪಾಯಿ ಕೊಟ್ಟ ಉದ್ಯಮಿಗೆ ಇನ್ನೊಂದು ತಿಂಗಳು ಕಳೆದರೂ ಮರ ಇರುವ ಸ್ಥಳದ ನಕಾಶೆ ನೀಡಲು ಪುನಃ 30,000-00 ಡಿಮಾಂಡ್ ಇಟ್ಟಿದ್ದರು,


ಇದರಿಂದ ರೋಸಿ ಹೋದ ಸಂಬಂಧಪಟ್ಟ ನಾಗರಿಕರು ಕೊನೆಗೆ ಮಂಗಳೂರಿನ NECF ಸಂಘಟನೆಯ ಗಮನಕ್ಕೆ ತಂದರು.


ನಂತರ ಈ ವಿಚಾರವನ್ನು ಮಂಗಳೂರಿನ ACB ಇನ್ಸ್ಪೆಕ್ಟರ್ ಶ್ಯಾಮಸುಂದರ್ ಅವರ ಗಮನಕ್ಕೆ ತರಲಾಯಿತು.


ಸುಮಾರು ಮೂರು ದಿನಗಳ ಮುಂಜಾಗ್ರತಾ ಕಾರ್ಯಾಚರಣೆ ಮಾಡಿ ಮಂಗಳವಾರ 5-30 ರ ಹೊತ್ತಿಗೆ ಮಂಗಳೂರಿನ ಮಿನಿ ವಿಧಾನ ಸೌಧದ ಎದುರು ಚೌಕಾಶಿ ಮಾಡಿ ಮಾಡಿ ಕೊನೆಗೆ 20,000-00 ರೂಪಾಯಿ ಲಂಚದ ಹಣ ತೆಗೆದು ಕೊಳ್ಳುವ ಸಮಯದಲ್ಲಿ ಸಾಕ್ಷಿ ಸಮೇತ ಸರ್ವೇಯರ್ ಗಂಗಾಧರ್ ಎಂಬ ಮಹಾ ಭ್ರಷ್ಟ ಅಧಿಕಾರಿಯನ್ನು ACB ತಂಡ ಬಂಧಿಸಿದೆ.


ಈ ಕಾರ್ಯಾಚರಣೆಯಲ್ಲಿ ಎಸಿಬಿ ಡಿವೈಎಸ್‌ಪಿ ಪ್ರಕಾಶ್, ಇನ್ಸ್ಪೆಕ್ಟರ್ ಗಳಾದ ಶ್ಯಾಮಸುಂದರ್ ಮತ್ತು ಗುರುರಾಜ್, ಸಿಬಂಧಿಗಳಾದ- ಹರಿಪ್ರಸಾದ್, ರಾಧಾಕೃಷ್ಣ ಕೆ, ಗಂಗಣ್ಣ, ರಾಧಾಕೃಷ್ಣ, ಉಮೇಶ್, ಆದರ್ಶ, ರಾಕೇಶ್, ರಾಜೇಶ್, ಭರತ್, ಮೋಹನ್ ಸಾಲಿಯಾನ್ ಪಾಲ್ಗೊಂಡಿದ್ದರು,


ಸಾರ್ವಜನಿಕರಲ್ಲಿ ವಿನಂತಿ: ತಮ್ಮಲ್ಲಿ ಯಾರಾದರೂ ಲಂಚಕ್ಕಾಗಿ ಪೀಡಿಸಿದಲ್ಲಿ ಹೆದರದೇ ಕೂಡಲೇ ACB/ NECF ಸಂಪರ್ಕ ಮಾಡಿ..

Ads on article

Advertise in articles 1

advertising articles 2

Advertise under the article

ಸುರ