-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
Pradeesh Marodi bags Pa Go Award | ಪ್ರಜಾವಾಣಿ ಪತ್ರಕರ್ತ ಪ್ರದೀಶ್ ಮರೋಡಿಗೆ ಈ ಬಾರಿಯ ಪ್ರತಿಷ್ಠಿತ ಪ.ಗೋ. ಪ್ರಶಸ್ತಿ

Pradeesh Marodi bags Pa Go Award | ಪ್ರಜಾವಾಣಿ ಪತ್ರಕರ್ತ ಪ್ರದೀಶ್ ಮರೋಡಿಗೆ ಈ ಬಾರಿಯ ಪ್ರತಿಷ್ಠಿತ ಪ.ಗೋ. ಪ್ರಶಸ್ತಿ




ಮಂಗಳೂರು: ಗ್ರಾಮೀಣ ವರದಿಗಾರಿಕೆಗೆ ನೀಡಲಾಗುತ್ತಿರುವ ಪ್ರತಿಷ್ಠಿತ ಪದ್ಯಾಣ ಗೋಪಾಲಕೃಷ್ಣ ಪ್ರಶಸ್ತಿಗೆ ಪ್ರಜಾವಾಣಿಯ ವರದಿಗಾರ ಪ್ರದೀಶ್ ಮರೋಡಿ ಭಾಜನರಾಗಿದ್ದಾರೆ.


ಕಳೆದ ವರ್ಷ ಜೂನ್ 25ರಂದು ಪ್ರಜಾವಾಣಿ ಪತ್ರಿಕೆಯಲ್ಲಿ ಪ್ರಕಟವಾದ ಅವರ "ಕೇಳುತ್ತಿಲ್ಲ ಮಲೆಯ ಮಕ್ಕಳ ಅಳಲು" ಎಂಬ ಪರಿಣಾಮಕಾರಿ ವರದಿಗೆ ಈ ಪುರಸ್ಕಾರ ಸಂದಿದೆ.


ಮಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಕ್ಷ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕರಾದ ಡಾ. ಧನಂಜಯ ಕುಂಬ್ಳೆ, ಪುತ್ತೂರು ಡಾ. ಶಿವರಾಮ ಕಾರಂತ ಬಾಲವನದ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಸಂಶೋಧಕ ಡಾ. ಸುಂದರ ಕೇನಾಜೆ ಮತ್ತುಮಂಗಳೂರು ವಿವಿ ಕಾಲೇಜಿನ ಉಪನ್ಯಾಸಕಿ ಡಾ. ಸೌಮ್ಯ ಕಿಕ್ಕೇರಿ ಅವರನ್ನೊಳಗೊಂಡ ಆಯ್ಕೆ ಸಮಿತಿಯು ಈ ವರದಿಯನ್ನು ಪ್ರಶಸ್ತಿಗೆ ಆರಿಸಿದೆ.



ಮಂಗಳವಾರ ಮಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಈ ಪ್ರಶಸ್ತಿಯನ್ನು ಪುರಸ್ಕೃತರಿಗೆ ನೀಡಲಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ