-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
inhuman act-accused arrest | ಬೈಕ್‌ಗೆ ಕಟ್ಟಿ ಶ್ವಾನವನ್ನು ಎಳೆದೊಯ್ದ ಆರೋಪಿಯ ಸೆರೆ, ಇನ್ನೊಬ್ಬನಿಗೆ ಶೋಧ

inhuman act-accused arrest | ಬೈಕ್‌ಗೆ ಕಟ್ಟಿ ಶ್ವಾನವನ್ನು ಎಳೆದೊಯ್ದ ಆರೋಪಿಯ ಸೆರೆ, ಇನ್ನೊಬ್ಬನಿಗೆ ಶೋಧ






ಮಂಗಳೂರು: ದ್ವಿಚಕ್ರ ವಾಹನದ ಹಿಂಬದಿಗೆ ನಾಯಿಯನ್ನು ಕಟ್ಟಿ ಅಮಾನವೀಯವಾಗಿ ಎಳೆದೊಯ್ದ ಪ್ರಕರಣ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ಪೈಕಿ ಒಬ್ಬಾತನನ್ನು ಪೊಲೀಸರು ಬಂಧಿಸಿದ್ದು, ಇನ್ನೊಬ್ಬನನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ಹೇಳಿದ್ದಾರೆ.


ಬಂಧಿತ ಆರೋಪಿಯನ್ನು ಕೊಪ್ಪಳ ಜಿಲ್ಲೆಯ ನೀಲಪ್ಪ ಎಂದು ಗುರುತಿಸಲಾಗಿದೆ. ಮಂಗಳೂರು ನಗರದ ಹೊರವಲಯದಲ್ಲಿ ಇರುವ ಸುರತ್ಕಲ್ ಸಮೀಪ ಎನ್‌ಐಟಿಕೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಬ್ಬರು ಮಾನವ ಸ್ವರೂಪಿ ರಾಕ್ಷಸರು ಈ ಕೃತ್ಯ ಎಸಗಿದ್ದರು.


ಈ ಘಟನೆಯನ್ನು ಸಾರ್ವಜನಿಕರೊಬ್ಬರು ತಮ್ಮ ಮೊಬೈಲ್‌ನಲ್ಲಿ ಶೂಟಿಂಗ್ ಮಾಡಿ ಪ್ರಾಣಿ ದಯಾ ಸಂಘದ ಸದಸ್ಯರ ಜೊತೆ ಶೇರ್ ಮಾಡಿದ್ದರು.





ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದು, ಅದರಂತೆ ಇಬ್ಬರು ಆರೋಪಿಗಳ ಪೈಕಿ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.


ಎಪ್ರಿಲ್ 15ರಂದು ರಾತ್ರಿ ಸುಮಾರು 8-30ಕ್ಕೆ ಈ ಘಟನೆ ನಡೆದಿದ್ದು, ಬೈಕ್‌ನ ಹಿಂದೆ ಇನ್ನೊಂದು ನಾಯಿ ಕೂಡ ಓಡೋಡಿ ಬಂದಿದೆ. ಆರೋಪಿಗಳು ಸರ್ವಿಸ್ ರಸ್ತೆಯಲ್ಲಿ ನಾಯಿಯನ್ನು ಅಮಾನುಷವಾಗಿ ಕಟ್ಟಿ ಎಳೆದೊಯ್ದಿದ್ದರು.

Ads on article

Advertise in articles 1

advertising articles 2

Advertise under the article