-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
VHP anger over notification | ಧಾರ್ಮಿಕ ಕಾರ್ಯಕ್ರಮಗಳಿಗೆ ಅನುಮತಿ ನೀಡದ ಸರಕಾರಿ ಆದೇಶಕ್ಕೆ ವಿಎಚ್‌ಪಿ ವಿರೋಧ

VHP anger over notification | ಧಾರ್ಮಿಕ ಕಾರ್ಯಕ್ರಮಗಳಿಗೆ ಅನುಮತಿ ನೀಡದ ಸರಕಾರಿ ಆದೇಶಕ್ಕೆ ವಿಎಚ್‌ಪಿ ವಿರೋಧ





ಕೊರೋನಾ ನಿಯಂತ್ರಿಸಲು ಧಾರ್ಮಿಕ ಕಾರ್ಯಕ್ರಮಗಳಿಗೆ ನಿರ್ಬಂಧ ಹೇರಿರುವ ರಾಜ್ಯ ಸರ್ಕಾರದ ಆದೇಶಕ್ಕೆ ವಿಶ್ವ ಹಿಂದೂ ಪರಿಷತ್ ತೀವ್ರ ವಿರೋಧ ವ್ಯಕ್ತಪಡಿಸಿದೆ.


ಸರ್ಕಾರಿ ಆದೇಶದ ಪ್ರಕಾರ ರಾಜಕೀಯ ಮತ್ತು ಮದುವೆ ಸಮಾರಂಭಗಳು ನಡೆಸಬಹುದು. ಆದರೆ, ಧಾರ್ಮಿಕ ಕಾರ್ಯಕ್ರಮ ಏಕಿಲ್ಲ ಎಂದು ಅದು ಪ್ರಶ್ನಿಸಿದೆ.


ಕಳೆದ ಎರಡು ತಿಂಗಳಲ್ಲಿ ಸಾಕಷ್ಟು ದೈವಾರಾಧನೆ ಕಾರ್ಯಕ್ರಮಗಳು, ನೇಮೋತ್ಸವ, ಕೋಲ, ಜಾತ್ರೆಗಳು ನಡೆದಿವೆ. ಬ್ರಹ್ಮಕಲಶ, ಯಕ್ಷಗಾನದಂತಹ ಧಾರ್ಮಿಕ ಕಾರ್ಯಕ್ರಮಗಳ ದಿನ ನಿಗದಿಯಾಗಿವೆ. ತಯಾರಿ ಕೂಡ ನಡೆದಿವೆ. ಆದರೆ, ಈಗ ಏಕಾಏಕಿ ಕೋವಿಡ್ ನೆಪದಲ್ಲಿ ಈ ಕಾರ್ಯಕ್ರಮಗಳಿಗೆ ನಿಷೇಧ ಹೇರಿವುದು ಸರಿಯಲ್ಲ ಎಂದು ವಿಎಚ್‌ಪಿ ಅಭಿಪ್ರಾಯಪಟ್ಟಿದೆ.


ಉದ್ಯಮಿ ಅಶೋಕ್ ರೈ, ಶರಣ್ ಪಂಪ್‌ವೆಲ್, ಮಾಜಿ ಶಾಸಕ ಮೋನಪ್ಪ ಭಂಡಾರಿ, ವಿಎಚ್‌ಪಿ ಜಿಲ್ಲಾಧ್ಯಕ್ಷ ಗೋಪಾಲ್ ಕುತ್ತಾರ್, ಬಿಜೆಪಿ ಮುಖಂಡರಾದ ಹರಿಕೃಷ್ಣ ಬಂಟ್ವಾಳ್ ಅವರನ್ನೊಳಗೊಂಡ ನಿಯೋಗ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರನ್ನು ಭೇಟಿ ಮಾಡಿ ಮನವಿ ಮಾಡಿದೆ.


ಈ ಆದೇಶವನ್ನು ಮರುಪರಿಶೀಲಿಸಿ, ಧಾರ್ಮಿಕ ಕಾರ್ಯಕ್ರಮಕ್ಕೆ ಅವಕಾಶ ನೀಡಬೇಕು ಎಂದು ನಿಯೋಗ ಮನವಿ ಮಾಡಿದೆ.


Ads on article

Advertise in articles 1

advertising articles 2

Advertise under the article

ಸುರ