-->

Ravindra Shetty Ulidottu- ಸಂತ್ರಸ್ತ ಶಿಳ್ಳೆಕ್ಯಾತರ ಗುಡಿಸಲಿಗೆ  ಅಲೆಮಾರಿ ಅಭಿವೃದ್ಧಿ ನಿಗಮ ಅಧ್ಯಕ್ಷರ ಭೇಟಿ, ಪರಿಹಾರದ ಭರವಸೆ

Ravindra Shetty Ulidottu- ಸಂತ್ರಸ್ತ ಶಿಳ್ಳೆಕ್ಯಾತರ ಗುಡಿಸಲಿಗೆ ಅಲೆಮಾರಿ ಅಭಿವೃದ್ಧಿ ನಿಗಮ ಅಧ್ಯಕ್ಷರ ಭೇಟಿ, ಪರಿಹಾರದ ಭರವಸೆ




ತೌಕ್ತೆ ಚಂಡಮಾರುತದ ಅಬ್ಬರಕ್ಕೆ ಮನೆ ಮಠ ಕಳೆದುಕೊಂಡ ಮಂಗಳೂರಿನ ಅಲೆಮಾರಿ ಶಿಳ್ಳೆಕ್ಯಾತ ಸಮುದಾಯ ಗುಡಿಸಲಿಗೆ ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು ಭೇಟಿ ನೀಡಿದರು. ಜೊತೆಗೆ ಸರ್ಕಾರದ ಜೊತೆ ಮಾತನಾಡಿ ಸೂಕ್ತ ಪರಿಹಾರ ದೊರಕಿಸುವ ಭರವಸೆ ನೀಡಿದರು.




ತೌಕ್ತೆ ಚಂಡಮಾರುತದ ಅಬ್ಬರದಿಂದ ವಿಪರೀತವಾಗಿ ಬೀಸಿದ ಬಿರುಗಾಳಿ, ಮಳೆಗೆ ಹೊಯಿಗೆ ಬಜಾರ್ ಸರಕಾರಿ ಜಮೀನಿನಲ್ಲಿ ಟೆಂಟ್ ಹಾಕಿ ಬದುಕುತ್ತಿದ್ದ ಅಲೆಮಾರಿ ಶಿಳ್ಳೆಕ್ಯಾತ ಸಮುದಾಯದ ಕುಟುಂಬಗಳ ಗುಡಿಸಲುಗಳು ಹಾರಿ ಹೋಗಿ ಗಾಳಿ, ಮಳೆಯಿಂದ ತಮ್ಮನ್ನು ತಾವು ಕಾಪಾಡಲು ಸಮಸ್ಯೆಯನ್ನು, ಬಹಳ ನಷ್ಟವನ್ನು ಅನುಭವಿಸಿದ್ದರು.






ಮಾತ್ರವಲ್ಲದೆ ಕೋರೋನಾ ರೋಗದ ಈ ಕಾಲಘಟ್ಟದಲ್ಲಿ ಉಂಟಾದ ಸಮಸ್ಯೆ ಮತ್ತು ಲಾಕ್ಡೌನ್ ತಮ್ಮ ಬದುಕಿಗೆ ಮೂಲ ಆಧಾರವಾಗಿದ್ದ ಕುಲ ಕಸುಬನ್ನೇ ಕಸಿದುಕೊಂಡಿದ್ದು, ಒಂದೊತ್ತಿನ ಊಟಕ್ಕೂ ಪರದಾಡುವ ಸ್ಥಿತಿ‌ ನಿರ್ಮಾಣವಾಗಿದ್ದ ಈ ಸಮುದಾಯಕ್ಕೆ ಜಿಲ್ಲಾಡಳಿತ ಕೂಡಲೇ ಮದ್ಯಪ್ರವೇಶಿಸಿ ಆಹಾರ ಭದ್ರತೆ ಸಹಿತ ಪ್ರಾಕೃತಿಕ ವಿಕೋಪದ ಅಡಿಯಲ್ಲಿ ಆರ್ಥಿಕ ನೆರವು ನೀಡಬೇಕೆಂದು ಪತ್ರಿಕಾ ಪ್ರಕಟಣೆ ಮೂಲಕ ಒತ್ತಾಯಿಸಲಾಗಿತ್ತು. 









ಈ ಬಗ್ಗೆ ಗಮನಹರಿಸಿದ ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಕೆ. ರವೀಂದ್ರ ಶೆಟ್ಟಿ ಹೊಯಿಗೆ ಬಜಾರ್ ನ ಶಿಳ್ಳೆಕ್ಯಾತ ಸಮುದಾಯದ ಕ್ಯಾಂಪ್ ಗೆ ಭೇಟಿಕೊಟ್ಟು ಅವರ ಸಮಸ್ಯೆಗಳನ್ನು ಆಲಿಸಿದರು.



ಚಂಡಮಾರುತದಿಂದಾದ ಸಮಸ್ಯೆ ಮತ್ತು ಅವರ ಸಾಮಾಜಿಕ, ಆರ್ಥಿಕ ಸಮಸ್ಯೆಗಳನ್ನು ಮುಂದಿನ ದಿನಗಳಲ್ಲಿ ಸರಿಪಡಿಸಲು ಪ್ರಯತ್ನಿಸಲಾಗುವುದು ಎಂದು ಭರವಸೆಯನ್ನಿತ್ತರು. ಈ ವೇಳೆ ಕರಾವಳಿ ವೃತ್ತಿನಿರತ ಅಲೆಮಾರಿ ಶಿಳ್ಳೆಕ್ಯಾತ ಹಕ್ಕುಗಳ ಸಮಿತಿಯ ಗೌರವಾಧ್ಯಕ್ಷರು, ಡಿವೈಎಫ್ಐ ದ.ಕ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ , ಅಲೆಮಾರಿ ನಿಗಮದ ಅಧಿಕಾರಿ ಸೋಮಪ್ಪ ಉಪಸ್ಥಿತರಿದ್ದರು.


Ads on article

Advertise in articles 1

advertising articles 2

Advertise under the article