-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
historic Circle demolished- ಮಂಗಳೂರಿನ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ವೃತ್ತ ರಾತೋರಾತ್ರಿ ನೆಲಸಮ!

historic Circle demolished- ಮಂಗಳೂರಿನ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ವೃತ್ತ ರಾತೋರಾತ್ರಿ ನೆಲಸಮ!




ಮಂಗಳೂರಿನ ಹೃದಯ ಭಾಗದಲ್ಲಿ ಇರುವ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ವೃತ್ತವನ್ನು ರಾತೋರಾತ್ರಿ ನೆಲಸಮ ಮಾಡಲಾಗಿದೆ. ಯಾರೊಬ್ಬರಿಗೂ ಯಾವುದೇ ಸುಳಿವು ನೀಡದೆ, ಸ್ಮಾರ್ಟ್ ಸಿಟಿ ಕಾಮಗಾರಿಯ ನೆಪದಲ್ಲಿ ಈ ವೃತ್ತವನ್ನು ಕೆಡವಲಾಗಿದೆ.



ದಶಕಗಳ ಹಿಂದೆ ಮಂಗಳೂರಿನ ಪ್ರಮುಖ ಪತ್ರಿಕೆಯಾಗಿದ್ದ ನವಭಾರತ ಮುದ್ರಣಾಲಯ ಮತ್ತು ಕಚೇರಿ ಇದ್ದ ಕಾರಣಕ್ಕೆ ಈ ವೃತ್ತವನ್ನು ನವಭಾರತ ಸರ್ಕಲ್ ಎಂದು ಕರೆಯಲಾಗುತ್ತಿತ್ತು.


ರಾಜ್ಯದ ಮೊದಲ ರಾಷ್ಟ್ರಕವಿ ಪಂಜೆ ಗೋವಿಂದ ಪೈ ನೆನಪಿಗೆ ಈ ವೃತ್ತವನ್ನು ಗೋವಿಂದ ಪೈ ವೃತ್ತ ಎಂದು ಹೆಸರಿಡಲಾಗಿತ್ತು.





ಈ ವೃತ್ತವನ್ನು ಧ್ವಂಸ ಮಾಡಿರುವ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಕನ್ನಡ ಸಂಘಟನೆಗಳು ಈ ಕಾಮಗಾರಿ ಬಗ್ಗೆ ಧ್ವನಿ ಎತ್ತಿವೆ. ನಾಳೆ ಎರಡನೇ ಶನಿವಾರವಾಗಿದ್ದು, ಕೋರ್ಟ್ ಕಚೇರಿಗಳಿಗೆ ರಜೆ. ಈ ಸಮಯವನ್ನು ನೋಡಿ ಕದ್ದುಮುಚ್ಚಿ ಇಂತಹ ಕೃತ್ಯಕ್ಕೆ ಕೈ ಹಾಕಿರುವ ದರ್ದು ಏನು ಎಂದು ಮಂಗಳೂರಿನ ಜನತೆ ಪ್ರಶ್ನೆ ಮಾಡಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ