-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
Vaccination to young advocates- ಮಂಗಳೂರು ಯುವ ವಕೀಲರಿಗೆ ಆದ್ಯತೆ ಮೇರೆಗೆ ಲಸಿಕೆ ಕಾರ್ಯಕ್ರಮ

Vaccination to young advocates- ಮಂಗಳೂರು ಯುವ ವಕೀಲರಿಗೆ ಆದ್ಯತೆ ಮೇರೆಗೆ ಲಸಿಕೆ ಕಾರ್ಯಕ್ರಮ





ಮಂಗಳೂರು ವಕೀಲರ ಸಂಘದ ವತಿಯಿಂದ ನಗರದ ಯುವ ವಕೀಲರಿಗೆ ಕೋವಿಡ್ ಮುಂಚೂಣಿ ಯೋಧರು ಎಂಬ ನೆಲೆಯಲ್ಲಿ ಲಸಿಕೆ ನೀಡುವ ಕಾರ್ಯಕ್ರಮ ನ್ಯಾಯಾಲಯ ಆವರಣದಲ್ಲಿ ಯಶಸ್ವಿಯಾಗಿ ನಡೆಯಿತು.



ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಶ್ರೀ ಮುರಳೀಧರ ಪೈ ಅವರ ಮುತುವರ್ಜಿಯಿಂದ ಆರೋಗ್ಯ ಇಲಾಖೆಯ ಅಧಿಕಾರಿಗಳು ಸುಮಾರು 200 ಯುವ ವಕೀಲರಿಗೆ ಲಸಿಕೆ ನೀಡಿದರು.



ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಎನ್. ನರಸಿಂಹ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ಎಚ್.ವಿ. ರಾಘವೇಂದ್ರ, ಉಪಾಧ್ಯಕ್ಷರಾದ ಜಿನೇಂದ್ರ ಕುಮಾರ್, ಜೊತೆ ಕಾರ್ಯದರ್ಶಿ ಪ್ರಮೀಳಾ, ಕಾರ್ಯಕಾರಿ ಸಮಿತಿ ಸದಸ್ಯರಾದ ಪ್ರಮೋದ್ ಕೆರ್ವಾಶೆ, ರವಿರಾಜ ಶೆಟ್ಟಿ, ಪ್ರೇಮ್ ಅಂಚನ್, ಶುಕರಾಜ ಕೊಟ್ಟಾರಿ, ವಿನಯ ಕುಮಾರ್, ಚಂದ್ರಹಾಸ ಕೊಟ್ಟಾರಿ, ಯುವರಾಜ್ ಅಮೀನ್, ಹರೀಶ್ ಮೊದಲಾದವರು ಲಸಿಕೆ ಅಭಿಯಾನದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗೆ ಉಪಯುಕ್ತ ನೆರವು ನೀಡಿದರು.







ಜಿಲ್ಲಾ ನ್ಯಾಯಾಧೀಶರ ಸೂಚನೆ ಹಾಗೂ ಮನವಿ ಮೇರೆಗೆ ಜಿಲ್ಲಾಡಳಿತ ಈ ವಿಶೇಷ ಲಸಿಕಾ ಅಭಿಯಾನವನ್ನು ನಡೆಸಿತ್ತು. ಈ ಹಿಂದೆ, ನ್ಯಾಯಾಂಗ ಸಿಬ್ಬಂದಿಗೆ ಹಾಗೂ 45 ವರ್ಷ ಮೇಲ್ಪಟ್ಟ ವಕೀಲರಿಗೆ ಲಸಿಕೆ ನೀಡುವ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿತ್ತು.



ಎರಡೂ ಶಿಬಿರಗಳಲ್ಲಿ ಪಾಲ್ಗೊಳ್ಳಲು ಸಾಧ್ಯವಾಗದವರಿಗೆ ಹಾಗೂ ವಕೀಲರ ಕುಟುಂಬ ಸದಸ್ಯರಿಗೂ ಮುಂದಿನ ದಿನಗಳಲ್ಲಿ ಲಸಿಕೆ ಅಭಿಯಾನ ನಡೆಸುವ ಚಿಂತನೆ ನಡೆಸಲಾಗುವುದು ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಶ್ರೀ ಮುರಳೀಧರ ಪೈ ಭರವಸೆ ನೀಡಿದರು.

Ads on article

Advertise in articles 1

advertising articles 2

Advertise under the article

ಸುರ