-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
VHP Jagarana Vedike- ಹಲ್ಲೆ, ಬೆದರಿಕೆ ಆರೋಪ: ಹಿಂದೂ ಪರ ಸಂಘಟನೆ ಕಾರ್ಯಕರ್ತರ ಪರಸ್ಪರ ಹೊಡೆದಾಟ, ಠಾಣೆಗೆ ದೂರು

VHP Jagarana Vedike- ಹಲ್ಲೆ, ಬೆದರಿಕೆ ಆರೋಪ: ಹಿಂದೂ ಪರ ಸಂಘಟನೆ ಕಾರ್ಯಕರ್ತರ ಪರಸ್ಪರ ಹೊಡೆದಾಟ, ಠಾಣೆಗೆ ದೂರು





ಹಿಂದೂ ಸಂಘಟನೆಗಳು ಪರಸ್ಪರ ಬೆದರಿಕೆ, ಹಲ್ಲೆ ಆರೋಪ ಮಾಡಿ ಪೊಲೀಸ್ ಠಾಣೆ ಮೆಟ್ಟಿಲೇರಿದ ಕುತೂಹಲಕಾರಿ ಘಟನೆ ಬಂಟ್ವಾಳದಲ್ಲಿ ನಡೆದಿದೆ.



ಸಂಘಟನೆಯ ಪ್ರಮುಖ ನಾಯಕರಿಗೆ ಪದೇ ಪದೇ ಕಿರುಕುಳ, ತೊಂದರೆ ನೀಡಲಾಗುತ್ತಿದೆ ಎಂದು ಆರೋಪಿಸಿ ಪುತ್ತೂರು ಜಿಲ್ಲಾ ಹಿಂದೂ ಜಾಗರಣ ವೇದಿಕೆ ಆರೋಪಿಸಿತ್ತು. ಇದಕ್ಕೆ ಪ್ರತಿಯಾಗಿ ವಿಶ್ವಹಿಂದೂ ಪರಿಷತ್ ಮತ್ತು ಬಜರಂಗ ದಳ ಕೂಡ ಪ್ರತ್ಯಾರೋಪ ಮಾಡಿತ್ತು.



ಈ ಪರಸ್ಪರ ಆರೋಪ- ಪ್ರತ್ಯಾರೋಪಗಳು ಮುಂದುವರಿದು, ಬೆದರಿಕೆ ಮತ್ತು ಹಲ್ಲೆಯ ಆರೋಪಗಳೂ ನಡೆದಿದ್ದವು.



ಕಳೆದ ಜೂನ್ 7ರಂದು ಎರಡು ಸಂಘಟನೆಗಳ ಕಾರ್ಯಕರ್ತರ ತಂಡಗಳು ಪರಸ್ಪರ ಹೊಡೆದಾಡಿಕೊಂಡಿದ್ದು, ಕಾರಿನ ಮೇಲೆ ದಾಳಿ ಮತ್ತು ಮಾರಕಾಸ್ತ್ರಗಳಿಂದ ಹಲ್ಲೆ ಪ್ರಯತ್ನವನ್ನೂ ಮಾಡಿತ್ತು ಎಂದು ಉಭಯ ಸಂಘಟನೆಗಳು ಆರೋಪಿಸಿವೆ. 



ಈ ಬಗ್ಗೆ ಬಂಟ್ವಾಳ ಪೊಲೀಸರಿಗೆ ದೂರು ನೀಡಲಾಗಿದ್ದು, ಹಿಂದೂ ಸಂಘಟನೆಗಳ ನಾಯಕರನ್ನು ಮತ್ತು ಕಾರ್ಯಕರ್ತರನ್ನು ಸಮಾಧಾನ ಪಡಿಸುವುದು ಪೊಲೀಸರಿಗೆ ಹೊಸ ತಲೆನೋವು ತಂದಿದೆ ಎನ್ನಲಾಗಿದೆ.


Ads on article

Advertise in articles 1

advertising articles 2

Advertise under the article

ಸುರ