DV resgin- ಸಿಎಂ ಆಗಿ ಕಟೀಲಿಗೆ ಬಂದಿದ್ದ ಡಿವಿಎಸ್ – 9 ವರ್ಷಗಳ ಬಳಿಕ ಅದೇ ದಿನ ರಾಜೀನಾಮೆ



ಮಂಗಳೂರು: ಡಿ.ವಿ. ಸದಾನಂದ ಗೌಡ ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ಧಾರೆ. ಕರಾವಳಿ ಮೂಲದ ರಾಜಕಾರಣಿಯ ಈ ರಾಜೀನಾಮೆಗೂ ಕಟೀಲು ಕ್ಷೇತ್ರಕ್ಕೂ ಸಂಬಂಧ ಇದೆಯೇ..?



ಹೌದು, ಇದೆ ಎನ್ನುತ್ತದೆ ಈ ಕಾಕತಾಳೀಯ ಘಟನೆ.



2012ರಲ್ಲಿ ಆಗಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ನೀಡಿದ ಬಳಿಕ, ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದ ಡಿ.ವಿ ಸದಾನಂದ ಗೌಡ ಕರ್ನಾಟಕದ ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ತವರಿಗೆ ಆಗಮಿಸಿದ್ದರು.





ಸಿಎಂ ಆಗಿ ಅಧಿಕಾರ ಸ್ವೀಕರಿಸಿ ಜುಲೈ 7 ರಂದು ಮಂಗಳೂರಿನ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಈ ಭೇಟಿಗೆ ಈಗ 9 ವರ್ಷಗಳ ಸಂಭ್ರಮ. ಆದರೆ, ಕಾಕತಾಳೀಯವೆಂಬಂತೆ 9 ವರ್ಷಗಳ ಬಳೀಕ ಇದೇ ದಿನ ಕೇಂದ್ರ ಸಚಿವ ಸಂಪುಟಕ್ಕೆ ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿವಿಎಸ್ ರಾಜೀನಾಮೆ ನೀಡಿದ್ದಾರೆ.


ಇನ್ನೂ ವಿಚಿತ್ರ ಎಂದರೆ, ಆ ಭೇಟಿ ವೇಳೆ, ಶೋಭಾ ಕರಂದ್ಲಾಜೆ ಡಿವಿ ಸದಾನಂದ ಗೌಡರ ಪಕ್ಕದಲ್ಲೇ ಇದ್ದರು. ಈ ಬಾರಿ ಅವರ ರಾಜೀನಾಮೆಗೆ ಶೋಭಾ ಪರೋಕ್ಷವಾಗಿ ಕಾರಣರಾಗಿದ್ದಾರೆ ಎಂದು ವಿಶ್ಲೇಷಿಸಲಾಗುತ್ತದೆ.



ಕರ್ನಾಟಕದ ನಾಲ್ವರು ಸಂಸದರು ಮೋದಿ ಅವರ ನೂತನ ಸಂಪುಟಕ್ಕೆ ಸೇರ್ಪಡೆಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಡಿವಿಎಸ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.



ಸರಿಯಾಗಿ 9 ವರ್ಷಗಳ ಹಿಂದೆ ಇದೇ ದಿನ ಮುಖ್ಯಮಂತ್ರಿಯಾಗಿದ್ದ ವೇಳೆ ಕಟೀಲಿಗೆ ಬಂದು ದೇವಿ ದರ್ಶನ ಪಡೆದಿದ್ದರು. ಇದೇ ದಿನ ಇಂದು ಮೋದಿ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ.


ಮೋದಿ ಸಂಪುಟದಲ್ಲಿ ಸದಾನಂದ ಗೌಡರು ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

BREAKING NEWS
Loading latest news...
Join our WhatsApp Channel Powered By : Online Pudu