-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
Lady Officer- ಬೆಳ್ತಂಗಡಿಯ ಮಲೆಕುಡಿಯ ಯುವತಿ ಈಗ ದೇವರಾಜು ಅರಸು ಅಭಿವೃದ್ಧಿ ನಿಗಮದ ಅಧಿಕಾರಿ!

Lady Officer- ಬೆಳ್ತಂಗಡಿಯ ಮಲೆಕುಡಿಯ ಯುವತಿ ಈಗ ದೇವರಾಜು ಅರಸು ಅಭಿವೃದ್ಧಿ ನಿಗಮದ ಅಧಿಕಾರಿ!




ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಸವಣಾಲು ಗ್ರಾಮದ ಪಿಲಿಕಲ ಎಂಬಲ್ಲಿನ ಮಲೆಕುಡಿಯ ಸಮುದಾಯದ ಜಯಶ್ರೀ ಪಿಲಿಕಲ ರವರು ದೇವರಾಜು ಅರಸು ಅಭಿವೃದ್ಧಿ ನಿಗಮ ಮೂಲ್ಕಿ ತಾಲೂಕು ಇಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ನಿಯುಕ್ತರಾಗಿದ್ದಾರೆ.




ಇವರು ನೆರಿಯ ಆಲಂಗಾಯಿ ಆಶ್ರಮ ಶಾಲೆಯಲ್ಲಿ ಪ್ರಾಥಮಿಕ , ನೇತಾಜಿ ಸುಭಾಶ್ಚಂದ್ರ ಬೋಸ್ ಪ್ರೌಢಶಾಲೆ ಸವಣಾಲು ಇಲ್ಲಿ ಪ್ರೌಢ ಶಿಕ್ಷಣ , ಪಿಯುಸಿ ಶಿಕ್ಷಣ ಗುರುದೇವ ಕಾಲೇಜ್ , ಪದವಿ ಶಿಕ್ಷಣವನ್ನು ಎಸ್.ಡಿ.ಎಂ ಕಾಲೇಜಿನಲ್ಲಿ , ಸ್ನಾತಕೋತ್ತರ ಪದವಿಯನ್ನು (MHRD) ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಹಾಗೂ ಗ್ರಾಮೀಣಾಭಿವೃದ್ಧಿಯಲ್ಲಿ ಸ್ನಾತಕೋತ್ತರ ಪದವಿಯನ್ನು ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅಧ್ಯಯನ ಮಾಡಿರುತ್ತಾರೆ.



ಇವರು ಸವಣಾಲು ಗ್ರಾಮದ ಪಿಲಿಕಲ ಮಹಾಬಲ ಮಲೆಕುಡಿಯ ಎಂಬವರ ಮಗಳಾಗಿದ್ದು , ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ರಾಜ್ಯ ಸಮಿತಿ ಸದಸ್ಯ , ದ.ಕ ಜಿಲ್ಲಾ ಸಹಸಂಚಾಲಕ , ತಾಲೂಕು ಪ್ರಧಾನ ಕಾರ್ಯದರ್ಶಿ ಜಯಾನಂದ ಪಿಲಿಕಲರವರ ಸಹೋದರಿಯಾಗಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ