-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
Vasanth Bangera- ಜಿ.ಪಂ. ತಾಪಂ. ಚುನಾವಣೆ: SC-STಸಮುದಾಯಕ್ಕೆ ಮೀಸಲಾತಿಯಲ್ಲಿ ಅನ್ಯಾಯ- ವಸಂತ ಬಂಗೇರ

Vasanth Bangera- ಜಿ.ಪಂ. ತಾಪಂ. ಚುನಾವಣೆ: SC-STಸಮುದಾಯಕ್ಕೆ ಮೀಸಲಾತಿಯಲ್ಲಿ ಅನ್ಯಾಯ- ವಸಂತ ಬಂಗೇರ




ಬೆಳ್ತಂಗಡಿ: ಚುನಾವಣಾ ಆಯೋಗ ಘೋಷಣೆ ಮಾಡಿರುವ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣಾ ಮೀಸಲಾತಿ ಅವೈಜ್ಞಾನಿಕವಾಗಿದೆ. ಬೆಳ್ತಂಗಡಿಯ ಇತಿಹಾಸದಲ್ಲಿಯೇ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಒಂದೇ ಒಂದು ಕ್ಷೇತ್ರವನ್ನು ಮೀಸಲಿಡದೆ ಸಮುದಾಯಕ್ಕೆ ಅನ್ಯಾಯ ಮಾಡಲಾಗಿದೆ ಎಂದು ಮಾಜಿ ಶಾಸಕ ಕೆ.ವಸಂತ ಬಂಗೇರ ಆರೋಪಿದ್ದಾರೆ.


ಬೆಳ್ತಂಗಡಿಯಲ್ಲಿ ಮಾತನಾಡಿದ ಅವರು, "ಬೆಳ್ತಂಗಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಒಟ್ಟು 40,958 ಜನಸಂಖ್ಯೆ ಇದೆ. ಹೀಗಿದ್ದರೂ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಕನಿಷ್ಟ ಒಂದು ಕ್ಷೇತ್ರವನ್ನೂ ಮೀಸಲಿಟ್ಟಿಲ್ಲ. ಇದರಲ್ಲಿ ಸ್ಥಳೀಯ ಶಾಸಕ ಹರೀಶ್ ಪೂಂಜ ನೇರವಾಗಿ ಶಾಮೀಲಾಗಿದ್ದಾರೆ" ಎಂದು ಅವರು ಆರೋಪಿಸಿದರು.


Watch This Video:




ಬೆಳ್ತಂಗಡಿ ತಾಲೂಕಿನ ಕೆಲವೆಡೆ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಕ್ಷೇತ್ರವನ್ನು ಸಾಮಾನ್ಯ ಮಹಿಳೆಯರಿಗೆ ಮೀಸಲು ಇಡಲಾಗಿದೆ. ಧರ್ಮಸ್ಥಳ ತಾಲ್ಲೂಕು ಪಂಚಾಯಿತಿ ಕ್ಷೇತ್ರದಲ್ಲಿ ಈ ಹಿಂದೆ ಕೂಡ ಹಿಂದುಳಿದ ವರ್ಗ (ಎ) ಮೀಸಲಾತಿ ಇದ್ದು, ಈ ಬಾರಿ ಅದೇ ಮೀಸಲಾತಿಯನ್ನು ಮುಂದುವರಿಸಲಾಗಿದೆ ಎಂದು ಅವರು ಹೇಳಿದರು.

Ads on article

🎁 Amazon Prime ಸದಸ್ಯರಾಗಿರಿ

Amazon Prime Offer
👉 ಉಚಿತ shipping, Prime Video, shopping deals—all in one!

Disclosure: ಈ ಲಿಂಕ್ Amazon Affiliate Program ನ ಭಾಗವಾಗಿದೆ. ನೀವು ಈ ಲಿಂಕ್ ಮೂಲಕ Prime ಸದಸ್ಯರಾಗಿದರೆ, ನಮಗೆ commission ಸಿಗಬಹುದು.

Advertise in articles 1

advertising articles 2

Advertise under the article