-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
Renukacharya- ಲಾಬಿ ಮಾಡಿದ್ದರೆ ನಾನೂ ಸಚಿವನಾಗುತ್ತಿದ್ದೆ- ಗದ್ಗದಿತರಾದ ಮಾಜಿ ಸಚಿವ ರೇಣುಕಾಚಾರ್ಯ

Renukacharya- ಲಾಬಿ ಮಾಡಿದ್ದರೆ ನಾನೂ ಸಚಿವನಾಗುತ್ತಿದ್ದೆ- ಗದ್ಗದಿತರಾದ ಮಾಜಿ ಸಚಿವ ರೇಣುಕಾಚಾರ್ಯ




ಬೆಂಗಳೂರು: ಕಾಡಿ ಬೇಡಿ ಮಂತ್ರಿಯಾಗುವ ಅವಶ್ಯಕತೆ ನನಗಿಲ್ಲ, ಲಾಬಿ ಮಾಡಿದ್ರೆ, ನಾನು ಕೂಡ ಸಚಿವನಾಗುತ್ತಿದ್ದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಪ್ತ, ಹೊನ್ನಾಳಿ ಶಾಸಕ ರೇಣುಕಾಚಾರ್ಯ ಗದ್ಗದಿತರಾಗಿದ್ದಾರೆ.


ಬಸವರಾಜ್ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟದಲ್ಲಿ ತಮಗೆ ಸ್ಥಾನ ಕೈತಪ್ಪಿದ ಬೆನ್ನಲ್ಲೇ ರೇಣುಕಾಚಾರ್ಯ ಮಾಧ್ಯಮದಲ್ಲಿ ತಮ್ಮ ನೋವನ್ನು ತೋಡಿಕೊಂಡಿದ್ದಾರೆ.



ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪ ಅವರನ್ನು ಬದಲಿಸಬಾರದು ಎಂದು ಸಹಿ ಸಂಗ್ರಹ ಮಾಡಿರುವ ತಮಗೆ ಸಚಿವ ಸ್ಥಾನ ಕೈತಪ್ಪಿದ್ದೇಕೆ ಎಂಬ ಪ್ರಶ್ನೆಗೆ ಉತ್ತರಿಸಿದ ರೇಣುಕಾಚಾರ್ಯ, ತಾವು ಈಗ ಏನೇ ಮಾತನಾಡಿದರೂ, ಮಂತ್ರಿ ಸ್ಥಾನ ಸಿಗಲಿಲ್ಲ ಎಂಬ ಅಸಮಾಧಾನದಲ್ಲಿ ಮಾತನಾಡಿದ್ದೇನೆ ಎಂದು ಭಾವಿಸಬಹುದು. ಹಾಗಾಗಿ, ಈಗ ನಡೆದ ಘಟನೆಗಳ ಬಗ್ಗೆ ಕೆದಕುವುದು ಬೇಡ ಎಂದು ಹೇಳಿದರು.


ನನಗೆ ಅಧಿಕಾರಕ್ಕಾಗಿ ಅಂಟಿಕೊಳ್ಳುವ ಜಾಯಮಾನ ಇಲ್ಲ. ನಾನು ಜನಸೇವೆ ಮಾಡುತ್ತೇನೆ. ಅಧಿಕಾರ ನನ್ನ ಹಿಂದೆ ಬರಬೇಕು ಎಂದು ಹೇಳಿದರು.



ಆತ್ಮಸಾಕ್ಷಿಗೆ ವಿರುದ್ಧವಾಗಿ ಅಧಿಕಾರಕ್ಕಾಗಿ ನಾನು ಲಾಬಿ ಮಾಡಿಲ್ಲ. ಕ್ಷೇತ್ರದಲ್ಲಿ ಕೆರೆ ಕಟ್ಟೆ ಹೊಡೆದು ಬೆಳೆ ನಾಶ ಆಗಿತ್ತು. ಅಲ್ಲಿ ಸಮೀಕ್ಷೆ ಮಾಡಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿ ಇಲ್ಲಿಗೆ ಬಂದಿದ್ದೇನೆ ಎಂದು ಅವರು ನೋವಿನಿಂದ ಹೇಳಿದರು.


ಈ ಮೂಲಕ, ಬೊಮ್ಮಾಯಿ ಸಂಪುಟದಲ್ಲಿ ಸ್ಥಾನ ವಂಚಿತರಾಗಿರುವ ಬಗ್ಗೆ ಅವರು ತಮ್ಮ ಅಸಮಾಧಾನವನ್ನು ಹೊರಹಾಕಿದರು.

Ads on article

Advertise in articles 1

advertising articles 2

Advertise under the article

ಸುರ