-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಆರು ವರ್ಷದ ಬಾಲಕಿಯ ಅತ್ಯಾಚಾರ ನಡೆಸಿ ಕೊಲೆ: ಆರೋಪಿಯ ಹುಡುಕಿ ಕೊಟ್ಟವರಿಗೆ 10 ಲಕ್ಷ ರೂ. ಬಹುಮಾನ ಘೋಷಿಸಿದ ಹೈದರಾಬಾದ್ ಪೊಲೀಸರು

ಆರು ವರ್ಷದ ಬಾಲಕಿಯ ಅತ್ಯಾಚಾರ ನಡೆಸಿ ಕೊಲೆ: ಆರೋಪಿಯ ಹುಡುಕಿ ಕೊಟ್ಟವರಿಗೆ 10 ಲಕ್ಷ ರೂ. ಬಹುಮಾನ ಘೋಷಿಸಿದ ಹೈದರಾಬಾದ್ ಪೊಲೀಸರು

ಹೈದರಾಬಾದ್​: ಆರು ವರ್ಷದ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಲೆಗೈದು ಪರಾರಿಯಾದ ರಾಕ್ಷಸನ ಬಂಧನಕ್ಕೆ ಎಲ್ಲೆಡೆಯಿಂದ ಆಕ್ರೋಶ ಕೇಳಿ ಬರುತ್ತಿದೆ.

ಸೆಪ್ಟೆಂಬರ್​ 9ರಂದು ಬಾಲಕಿ ತನ್ನ ಮನೆಯಿಂದ ನಾಪತ್ತೆಯಾಗಿದ್ದಳು. ಮರುದಿನ ಆಕೆಯ ಮೃತದೇಹ ಬೆಡ್​ಶೀಟ್​ನಲ್ಲಿ ಸುತ್ತಿಕೊಂಡಿರುವ ಸ್ಥಿತಿಯಲ್ಲಿ ನೆರೆಯ ಮನೆಯಲ್ಲಿ ಪತ್ತೆಯಾಗಿತ್ತು. ಈ ಬಗ್ಗೆ ಅತ್ಯಾಚಾರ ಆರೋಪವು ಪಲ್ಲಕೊಂಡ ರಾಜು (30) ಎಂಬಾತ ಮೇಲೆ ಬಂದಿದೆ. ಆತ ಬಾಲಕಿಯ ಪಕ್ಕದ ಮನೆಯ ನಿವಾಸಿಯಾಗಿದ್ದು, ಬಾಲಕಿ ಅತ್ಯಾಚಾರಗೊಂಡು ಮೃತದೇಹ ಪತ್ತೆಯಾದ ಬಳಿಕ ಕಣ್ಮರೆಯಾಗಿದ್ದ. 

ಕಳೆದ ವಾರ ಹೈದರಾಬಾದ್ ನಗರದ ಸೈಬರಾಬಾದ್​ ಸಿಂಗ್ರೌನಿ ಕಾಲನಿಯಲ್ಲಿ ಪಕ್ಕದ ಮನೆಯ ಆರು ವರ್ಷದ ಬಾಲಕಿಯನ್ನು ಈ ಕಾಮುಕ ಅತ್ಯಾಚಾರಗೈದು ಕೊಲೆ ಮಾಡಿದ್ದಾನೆ. ಬಳಿಕ ಆರೋಪಿ ಪರಾರಿಯಾಗಿದ್ದು ಈವರೆಗೂ ಆತ ಪತ್ತೆಯಾಗಿಲ್ಲ. ಆರೋಪಿಯು ಅರೆಸ್ಟ್ ಆದ ತಕ್ಷ ಎನ್​ಕೌಂಟರ್​ ಮಾಡುವಂತೆ ತೆಲಂಗಾಣ ಕಾರ್ಮಿಕ ಸಚಿವ ಮಲ್ಲ ರೆಡ್ಡಿ ಒತ್ತಾಯಿಸಿದ್ದಾರೆ. 

ಈ ನಡುವೆ ಆರೋಪಿಯ ಸುಳಿವು ನೀಡಿದವರಿಗೆ ಸೈಬರಾಬಾದ್​ ಪೊಲೀಸರು 10 ಲಕ್ಷ ರೂ. ಬಹುಮಾನ ಘೋಷಣೆ ಮಾಡಿದ್ದಾರೆ. ಅಲ್ಲದೆ, ಆತನ ಫೋಟೋ ಬಿಡುಗಡೆ ಮಾಡಿದ್ದು, ಆರೋಪಿಯ ಪತ್ತೆಯಾದಲ್ಲಿ 9490616366, 9490616627 ಮೊಬೈಲ್ ಸಂಖ್ಯೆಗೆ ಕರೆ ಮಾಡುವಂತೆ ಹೈದರಾಬಾದ್​ ಪೊಲೀಸರು ಹೇಳಿದ್ದಾರೆ.

ಈ ಪ್ರಕರಣದಲ್ಲಿ ಮೊದಲಿಗೆ ಆರೋಪಿಯನ್ನು ಬಂಧಿಸಲಾಗಿದೆ ಎಂಬ ಮಾತುಗಳು ಕೇಳಿ ಬಂದಿತ್ತು. ಆದರೆ, ಬಳಿಕ ಆರೋಪಿ ಇನ್ನೂ ಪತ್ತೆಯಾಗಿಲ್ಲ ಎಂಬ ವಿಚಾರ ಬೆಳಕಿಗೆ ಬಂದಿದೆ. ಈ ನಡುವೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಬಾಲಕಿಗೆ ನ್ಯಾಯ ಒದಗಿಸಿಕೊಡುವಂತೆ ಪ್ರತಿಭಟನೆ ನಡೆಯುತ್ತಿದೆ. 

ಘಟನೆ ಕುರಿತು ತೆಲಂಗಾಣ ಸಚಿವ ಕೆ.ಟಿ. ರಾಮರಾವ್​ ಪ್ರತಿಕ್ರಿಯೆ ನೀಡಿ,  ಸರಿಯಾದ ಮಾಹಿತಿ ಇಲ್ಲದೆ ಆರಂಭದಲ್ಲಿ ತಾನು ಆರೋಪಿಯ ಅರೆಸ್ಟ್ ಆಗಿದ್ದಾನೆಂದು ಟ್ವೀಟ್​ ಮಾಡಿದ್ದೆ. ನನ್ನ ತಪ್ಪು ಹೇಳಿಕೆಗೆ ವಿಷಾದಿಸುತ್ತೇನೆ. ಆರೋಪಿ ತಲೆಮರೆಸಿಕೊಂಡಿದ್ದು, ಹೈದರಾಬಾದ್​ ಪೊಲೀಸರು ಆತನ ಹಿಂದೆ ಬಿದ್ದಿದ್ದಾರೆ. ಆದಷ್ಟು ಬೇಗ ಆರೋಪಿಯನ್ನು ಬಂಧಿಸಲಾಗುವುದು ಮತ್ತು ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸಲಾಗುವುದು ಎಂದಿದ್ದಾರೆ. ಅನೇಕ ರಾಜಕಾರಣಿಗಳು, ಕಾರ್ಯಕರ್ತರು ಮತ್ತು ಸಿನಿಮಾ ಕಲಾವಿದರು ಈ ಘಟನೆ ಬಗ್ಗೆ ಕಳವಳ ವ್ಯಕ್ತಪಡಿಸಿ ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿದ್ದಾರೆ.

Ads on article

Advertise in articles 1

advertising articles 2

Advertise under the article