-->

ಆರ್​ಎಸ್​ಎಸ್ ಕ್ಯಾನ್ಸರ್​ ಇದ್ದಂತೆ ಎಂದ ಜಾವೇದ್ ಗೆ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ

ಆರ್​ಎಸ್​ಎಸ್ ಕ್ಯಾನ್ಸರ್​ ಇದ್ದಂತೆ ಎಂದ ಜಾವೇದ್ ಗೆ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ

ಮುಂಬೈ : ಆರ್​ಎಸ್​ಎಸ್ ವಿರುದ್ಧ ಗಂಭೀರ ಆರೋಪ ಮಾಡಿ ವಿವಾದಾತ್ಮಕ ಹೇಳಿಕೆ ನೀಡಿರುವ ಬಾಲಿವುಡ್ ಗೀತ ರಚನಾಕಾರ ಜಾವೇದ್ ಅಖ್ತರ್ ವಿರುದ್ಧ 100 ಕೋಟಿ ರೂ. ಮಾನ ನಷ್ಟ ಮೊಕದ್ದಮೆ ದಾಖಲಾಗಿದೆ. ವಕೀಲ​ ಸಂತೋಷ್​ ದುಬೆ ಎಂಬವರು ಜಾವೇದ್​ ಅಖ್ತರ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಆರ್​ಎಸ್​ಎಸ್​ ಕಾರ್ಯಕರ್ತ ಮತ್ತೋರ್ವ ವಕೀಲ ದೃಷ್ಟಿಮಾನ್​ ಜೋಶಿಯವರೂ​ ಅಖ್ತರ್ ವಿರುದ್ಧ ದೂರು ನೀಡಿದ್ದಾರೆ. ‘ಸೆ.4ರಂದು ಜಾವೇದ್​ ಅಖ್ತರ್​ ಟಿವಿ ಕಾರ್ಯಕ್ರಮವೊಂದರಲ್ಲಿ ಹಿಂದೂ ಸಂಘಟನೆಗಳನ್ನು ತಾಲಿಬಾನ್​ಗೆ ಹೋಲಿಸಿದ್ದಾರೆ. ಹಿಂದೂ ಧರ್ಮಕ್ಕಾಗಿ ನಿತ್ಯವೂ ಶ್ರಮಿಸುತ್ತಿರುವ ಸಂಘಟನೆಗಳ ಮಾನಹಾನಿ ಮಾಡುವ ಉದ್ದೇಶದಿಂದಲೇ ಅವರು​ ಈ ರೀತಿ ಹೇಳಿಕೆ ನೀಡಿದ್ದಾರೆ. ಆರ್​ಎಸ್​ಎಸ್ ಈ ಸಮಾಜದಲ್ಲಿ ಕ್ಯಾನ್ಸರ್​ ಇದ್ದಂತೆ ​ಎಂದು ಹೇಳಿರೋದು ಪೂರ್ವನಿಯೋಜಿತ ಕೆಲಸ. ಇದು ಆರ್​ಎಸ್‌ಎಸ್​ಗೆ ಸೇರ್ಪಡೆಗೊಳ್ಳುವವರನ್ನು ದಾರಿ ತಪ್ಪಿಸುವ ಹೇಳಿಕೆಯಾಗಿದೆ’ ಎಂದು ದೂರಿನಲ್ಲಿ ಜೋಶಿ ಆರೋಪಿಸಿದ್ದಾರೆ.

‘ಯಾವುದೇ ಸಾಕ್ಷಿಗಳಿಲ್ಲದೇ ಆರ್​ಎಸ್​ಎಸ್​ ಬಗ್ಗೆ ಜಾವೇದ್​ ಅಖ್ತರ್​ ಕಟುವಾದ ಹೇಳಿಕೆಗಳನ್ನು ನೀಡಿದ್ದಾರೆ. ದೇಶದ ಪ್ರಧಾನಿ, ರಾಷ್ಟ್ರಪತಿ ಹಾಗೂ ಕೇಂದ್ರದ ಅನೇಕ ಮಂತ್ರಿಗಳು ಆರ್​ಎಸ್​ಎಸ್​ ಬೆಂಬಲಿಗರಾಗಿದ್ದಾರೆ. ಇಂಥಹ ಸಂಘಟನೆಯ ಬಗ್ಗೆ ಜಾವೇದ್​ ಅಖ್ತರ್​ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ’ ಎಂದು ದೃಷ್ಟಿಮಾನ್​ ಜೋಶಿ ಹೇಳಿದ್ದಾರೆ. ಅ.30ರಂದು ಈ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆಯಲಿದೆ.

Ads on article

Advertise in articles 1

advertising articles 2

Advertise under the article