-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳೂರಿನಲ್ಲಿ ತೆಂಗಿನಕಾಯಿ ಕೀಳುವ ವೇಳೆ  ಪಿಲಿಕುಂಡೋಲು (ಕಣಜ ಹುಳು) ದಾಳಿ: 24 ವರ್ಷದ ಯುವಕ ಸಾವು

ಮಂಗಳೂರಿನಲ್ಲಿ ತೆಂಗಿನಕಾಯಿ ಕೀಳುವ ವೇಳೆ ಪಿಲಿಕುಂಡೋಲು (ಕಣಜ ಹುಳು) ದಾಳಿ: 24 ವರ್ಷದ ಯುವಕ ಸಾವು

ಮಂಗಳೂರು: ಮಂಗಳೂರಿನಲ್ಲಿ  ತೆಂಗಿನ ಮರದಿಂದ ಕಾಯಿ ಕೀಳುವ ವೇಳೆ ಪಿಲಿಕುಂಡೋಲು ( ಕಣಜ ಹುಳು) ದಾಳಿ ಮಾಡಿದ ಪರಿಣಾಮ 24 ವರ್ಷದ ಯುವಕ ಸಾವನ್ನಪ್ಪಿದ ಘಟನೆ ನಡೆದಿದೆ.


ಎಡಪದವಿನ ಪಟ್ಲಚ್ಚಿಲ್‌ನ ನಿವಾಸಿ ಸದಾಶಿವ ಮತ್ತು ಕಮಲಾಕ್ಷಿ ಅವರ  ಪುತ್ರ  ಕೇಶವ ಯಾನೆ ಕಿಟ್ಟ (24)  ಸಾವನ್ನಪ್ಪಿದವರು.ಇವರು ಎಂಸಿಎಫ್‌ನಲ್ಲಿ ಎಸಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದರು.



ಮನೆಯ ತೆಂಗಿನ ಮರಗಳ ಕಾಯಿ ಕೀಳಲು  ಹೊಸದಾಗಿ ಯಂತ್ರವನ್ನು ಇತ್ತೀಚೆಗೆ  ಖರೀದಿಸಲಾಗಿತ್ತು.  ಇದನ್ನು ಬಳಸಿಕೊಂಡು ಮರ ಏರಿದ ಸಂದರ್ಭದಲ್ಲಿ ಮರದಲ್ಲಿ ಗೂಡು ಕಟ್ಟಿದ್ದ ಪಿಲಿ‌ಕುಂಡೋಲು  ಗೂಡಿಗೆ ಕೇಶವರ ತಲೆ ತಾಗಿದ  ವೇಳೆ ಏಕಾಏಕಿಯಾಗಿ ಪಿಲಿಕುಂಡೋಲು ದಾಳಿ ಮಾಡಿವೆ. ಪಿಲಿ ಕುಂಡೋಲು ದಾಳಿಗೆ ಅವರ ಮೈಮೇಲೆ ಎಪ್ಪತ್ತಕ್ಕೂ ಅಧಿಕ ಕಡೆಗಳಲ್ಲಿ ಗಾಯಗಳಾಗಿವೆ.

ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆತಂದು  ಚಿಕಿತ್ಸೆ ನೀಡಲಾಯಿತಾದರೂ  ಚಿಕಿತ್ಸೆ ಫಲಿಸದೆ ಕೇಶವ ಅವರು ಕೊನೆಯುಸಿರೆಳೆದಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ