-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಭಾರತ ಬಂದ್ ಪ್ರತಿಭಟನೆ ವೇಳೆ ಡಿಸಿಪಿ ಕಾಲಿನ ಮೇಲೆ ಕಾರು ಹತ್ತಿಸಿದ ಚಾಲಕ

ಭಾರತ ಬಂದ್ ಪ್ರತಿಭಟನೆ ವೇಳೆ ಡಿಸಿಪಿ ಕಾಲಿನ ಮೇಲೆ ಕಾರು ಹತ್ತಿಸಿದ ಚಾಲಕ

 



 

ಬೆಂಗಳೂರು: ಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ  ಇಂದು ಕರೆ ನೀಡಲಾಗಿದ್ದ ಬಂದ್ ಪ್ರಯುಕ್ತ ರೈತಪರ ಸಂಘಟನೆಗಳಿಂದ  ನಡೆದ  ಪ್ರತಿಭಟನಾ ಮೆರವಣಿಗೆ ವೇಳೆ  ಡಿಸಿಪಿ ಅವರ ಕಾಲಿನ ಮೇಲೆ ಕಾರು ಹತ್ತಿಸಿದ ಘಟನೆ ನಡೆದಿದೆ.

 

ಇಂದು ಬಂದ್ ಕರೆಯ ಹಿನ್ನೆಲೆಯಲ್ಲಿ  ಬೆಂಗಳೂರು  ನಗರ ಉತ್ತರ ವಿಭಾಗದ ಡಿಸಿಪಿ ಧರ್ಮೇಂದ್ರ ಕುಮಾರ್ ಮೀನಾ ಅವರು ಮೆರವಣಿಗೆ ವೇಳೆ ಭದ್ರತೆ ಉಸ್ತುವಾರಿ ವಹಿಸಿಕೊಂಡಿದ್ದರು.  ಡಿಸಿಪಿ ಧರ್ಮೇಂದ್ರ  ಕುಮಾರ್ ಮೀನಾ ಅವರು  ಬಂದೋಬಸ್ತ್​ನಲ್ಲಿ ಇರುವಾಗ ಅವರ ಕಾಲಿನ ಮೇಲೆ ಕಾರು ಹರಿದಿದೆ. ಪ್ರತಿಭಟನೆ ವೇಲೆ ಬಂದು ಕಾರು ಇವರ ಕಾಲಿನ ಮೇಲೆ ಹರಿದಿದ್ದು ಇವರ ಕಾಲಿಗೆ ಗಾಯವಾಗಿದೆ.

ಗೋರಗುಂಟೆಪಾಳ್ಯ ಬಳಿ ಮೆರವಣಿಗೆ ನಡೆಯುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಯಶವಂತಪುರ ಸಂಚಾರಿ ಪೊಲೀಸರು ಚಾಲಕ ಹಾಗೂ ಕಾರನ್ನು ವಶಕ್ಕೆ  ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ

Ads on article

Advertise in articles 1

advertising articles 2

Advertise under the article

ಸುರ