-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಪ್ರೀತಿಸಿ ಮದುವೆಯಾದವಳು ಪಕ್ಕದ ಮನೆಯವನ ಜತೆ ಪರಾರಿ...ಮನನೊಂದ ಗಂಡ ಆತ್ಮಹತ್ಯೆಗೆ ಶರಣು..

ಪ್ರೀತಿಸಿ ಮದುವೆಯಾದವಳು ಪಕ್ಕದ ಮನೆಯವನ ಜತೆ ಪರಾರಿ...ಮನನೊಂದ ಗಂಡ ಆತ್ಮಹತ್ಯೆಗೆ ಶರಣು..

 ವಿಜಯಪುರ: ಪ್ರೀತಿಸಿ ಮದುವೆಯಾದವಳು ಪಕ್ಕದ ಮನೆಯವನ ಜತೆ ಎಸ್ಕೇಪ್​ ಆಗಿದ್ದಾಳೆ ಎಂಬ ಕಾರಣಕ್ಕೆ 
ಮನನೊಂದ ಗಂಡ ಇದೀಗ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆ ತಾಳಿಕೋಟಿ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. 

ವೆಂಕಟೇಶ ದೋರನಹಳ್ಳಿ (25) ಆತ್ಮಹತ್ಯೆ ಶರಣಾಗಿರುವ ವ್ಯಕ್ತಿ. ಸಾವಿಗೂ ಮುನ್ನ ವೆಂಕಟೇಶ್​ ಫೇಸ್​ಬುಕ್​ನಲ್ಲಿ ವಿಡಿಯೋ ಒಂದನ್ನು ಹರಿಬಿಟ್ಟು ನೇಣಿಗೆ ಶರಣಾಗಿದ್ದಾನೆ. ಎರಡು ವರ್ಷಗಳ ಹಿಂದೆ ವೆಂಕಟೇಶ್​ ಮತ್ತು ಯುವತಿ ಪ್ರೀತಿಸಿ ಮದುವೆಯಾಗಿದ್ದರು. ಆದರೆ, ವೆಂಕಟೇಶ್​ ಪಕ್ಕದ ಮನೆಯ ಸೋದರ ಸಂಬಂಧಿ ಶ್ರೀಶೈಲ್ ದೋರನಹಳ್ಳಿ ಎಂಬುವನ ಜೊತೆಗೆ ಯುವತಿ ಎಸ್ಕೇಪ್ ಆಗಿದ್ದಾಳೆಂದು ಆರೋಪಿಸಲಾಗಿದೆ. ಈ ಸಂಬಂಧ ವೆಂಕಟೇಶ್​ ತಾಳಿಕೋಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದ. ದೂರು ನೀಡಿದರೂ ವೆಂಕಟೇಶ್​ ಜತೆ ಇರೊಲ್ಲ, ಪ್ರಿಯಕರ ಶ್ರೀಶೈಲ್ ಜತೆ ಇರುವುದಾಗಿ ಯುವತಿ ಹೇಳಿದ್ದಾಳೆ. ಹೀಗಾಗಿ ಅವಮಾನ ಸಹಿಸದೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 

ಈ ಘಟನೆ ಸಂಬಂಧ ತಾಳಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article

ಸುರ