-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಹೆತ್ತವರಿಂದಲೇ ರಕ್ಷಿಸಿ ಎಂದು ಸಹಾಯವಾಣಿಗೆ ಕರೆ ಮಾಡಿದ ಅಪ್ರಾಪ್ತ ಬಾಲಕಿ

ಹೆತ್ತವರಿಂದಲೇ ರಕ್ಷಿಸಿ ಎಂದು ಸಹಾಯವಾಣಿಗೆ ಕರೆ ಮಾಡಿದ ಅಪ್ರಾಪ್ತ ಬಾಲಕಿ

ಬೆಂಗಳೂರು: ಆಪತ್ತು ಒದಗಿದಾಗ ರಕ್ಷಿಸಲು ಹೆತ್ತವರನ್ನು  ಕರೆಯುವುದು ಸಹಜ. ಆದರೆ ಇಲ್ಲೊಬ್ಬ ಯುವತಿ ಹೆತ್ತವರಿಂದಲೇ ರಕ್ಷಿಸಿ ಎಂದು ಸಹಾಯವಾಣಿಯ ಮೊರೆ ಹೋಗಿ ಸಹಾಯ ಕೋರಿದ್ದಾಳೆ. 

ಬೆಂಗಳೂರು ನಗರದ ಕೆರೆಗುಡ್ಡದಹಳ್ಳಿ ಗ್ರಾಮದ ನಿವಾಸಿ 17 ವರ್ಷದ ಬಾಲಕಿ ಸಹಾಯವಾಣಿಗೆ ಕರೆ ಮಾಡಿದಾಕೆ.  ಈಕೆ ಸಹಾಯವಾಣಿಗೆ ಕರೆ ಮಾಡಿ ತನ್ನ ತಾಯಿ-ತಂದೆಯ ವಿರುದ್ಧವೇ ದೂರಿತ್ತು ತನ್ನನ್ನು ರಕ್ಷಿಸಬೇಕೆಂದು ಕೋರಿಕೊಂಡಿದ್ದಾಳೆ. 

ತನಗೆ ತನ್ನ ತಾಯಿ-ತಂದೆಯೇ ಕಿರುಕುಳ ನೀಡುತ್ತಿದ್ದಾರೆ ಎಂದು ಬಾಲಕಿ ದೂರು ನೀಡಿರುವ ಹಿನ್ನೆಲೆಯಲ್ಲಿ ಮಕ್ಕಳ ಸಹಾಯವಾಣಿ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದವರು ಜಂಟಿ ಕಾರ್ಯಾಚರಣೆ ನಡೆಸಿ ಬಾಲಕಿಯನ್ನು ರಕ್ಷಿಸಿದ್ದಾರೆ. ಸದ್ಯ ಬಾಲಕಿಯನ್ನು ನಗರದ ಬಾಲಮಂದಿರದಲ್ಲಿ ಇರಿಸಲಾಗಿದೆ. 

ಈ ಬಗ್ಗೆ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Ads on article

Advertise in articles 1

advertising articles 2

Advertise under the article

ಸುರ