-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಅತ್ತೆ ಮನೆಗೆ ಬಂದ ಅಳಿಯ ಮೂರು ಕೊಲೆ ಮಾಡಿ ಪರಾರಿಯಾದ!

ಅತ್ತೆ ಮನೆಗೆ ಬಂದ ಅಳಿಯ ಮೂರು ಕೊಲೆ ಮಾಡಿ ಪರಾರಿಯಾದ!

ರಾಯಚೂರು: ಅತ್ತೆ ಮನೆಗೆ ಪಾಪಿ‌ ಅಳಿಯನೋರ್ವನು ಪತ್ನಿ, ಅತ್ತೆ ಹಾಗೂ ನಾದಿನಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾನೆ.

ಮಂಗಳವಾರ ರಾತ್ರಿ ರಾಯಚೂರು ಹೊರವಲಯದ ಯರಮರಸ್ ಕ್ಯಾಂಪ್​ ಎಂಬಲ್ಲಿ ಈ ಭಯಾನಕ ಘಟನೆ ನಡೆದಿದೆ. ವೈಷ್ಣವಿ(25), ಆರತಿ(16), ಸಂತೋಪಿ(45) ಮೃತ ದುರ್ದೈವಿಗಳು.

ಸಾಯಿ ಎಂಬಾತನಿಗೆ 6 ತಿಂಗಳ ಹಿಂದಷ್ಟೇ ವೈಷ್ಣವಿ ಎಂಬ ಯುವತಿಯೊಂದಿಗೆ ಮದುವೆಯಾಗಿತ್ತು. ಮದುವೆಯ ಬಳಿಕ ಸಾಯಿ ಹಾಗೂ ವೈಷ್ಣವಿ ನಡುವೆ ದಿನವೂ ಜಗಳವಾಗುತ್ತಿತ್ತು. ಇದರಿಂದ ವೈಷ್ಣವಿ ತವರು ಮನೆ ಸೇರಿದ್ದಳು. ಇದೇ ವಿಚಾರ ಮಾತನಾಡಲು ಅತ್ತೆ ಮನೆಗೆ ಬಂದಿದ್ದ ಸಾಯಿ ಜಗಳ ಕಾದಿದ್ದಾನೆ. ಈ ಸಂದರ್ಭ ಕೋಪಗೊಂಡ ಸಾಯಿ ಪತ್ನಿ, ಅತ್ತೆ, ನಾದಿನಿಯನ್ನ ಕೊಲೆ ಮಾಡಿ ಪರಾರಿಯಾಗಿದ್ದಾನೆ. 

ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಢಾಯಿಸಿದ್ದ ರಾಯಚೂರು ಗ್ರಾಮೀಣ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ. 

Ads on article

Advertise in articles 1

advertising articles 2

Advertise under the article

ಸುರ