-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಪತ್ನಿಯ ಮೇಲೆ ಅನುಮಾನ: ಕತ್ತು ಸೀಳಿ ಕೊಲೆಗೈದು ಪತಿ ಪರಾರಿ

ಪತ್ನಿಯ ಮೇಲೆ ಅನುಮಾನ: ಕತ್ತು ಸೀಳಿ ಕೊಲೆಗೈದು ಪತಿ ಪರಾರಿ

ಬೆಂಗಳೂರು: ಪತ್ನಿ ಬೇರೆಯವರೊಂದಿಗೆ ಸಂಬಂಧ ಇರಿಸಿಕೊಂಡಿದ್ದಾಳೆಂದು ಅನುಮಾನಗೊಂಡ ಪಾಪಿ ಪತಿಯೋರ್ವ ಆಕೆಯನ್ನು ಕತ್ತು ಸೀಳಿ ಕೊಲೆಗೈದ ಘಟನೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದಲ್ಲಿ ನಡೆದಿದೆ. 

ಅನ್ನಪೂರ್ಣೇಶ್ವರಿ ನಗರ ನಿವಾಸಿ ರೂಪಾ (34) ಕೊಲೆಯಾದ ದುರ್ದೈವಿ. ರಿಯಲ್ ಎಸ್ಟೇಟ್ ಉದ್ಯಮಿ ಕಾಂತರಾಜ್ (39) ಪತ್ನಿಯನ್ನು ಕೊಲೆ ಮಾಡಿದ ಆರೋಪಿ. 

ಕಾಂತರಾಜ್ ಗೆ ಪತ್ನಿ ರೂಪಾ ಬೇರೆಯವರೊಂದಿಗೆ ಸಂಬಂಧ ಇರಿಸಿಕೊಂಡಿದ್ದಾಳೆಂಬ ಶಂಕೆಯಿದ್ದು, ಈ ವಿಚಾರದಲ್ಲಿ ಪ್ರತಿನಿತ್ಯ ಜಗಳ ಮಾಡುತ್ತಿದ್ದ. ಇದರಿಂದ ದಂಪತಿ ಮಧ್ಯೆ ಆಗಾಗ ಮನಸ್ತಾಪಗಳು ಉಂಟಾಗುತ್ತಿತ್ತು. ಬುಧವಾರ ಸಂಜೆ 4.30 ಸುಮಾರಿಗೆ ಕಾಂತರಾಜ್ ಪತ್ನಿಯ ಮೊಬೈಲ್ ಅನ್ನು ಪರಿಶೀಲಿಸಿದ್ದಾನೆ. ಆಗ ಪತ್ನಿ ಪರ ಪುರುಷನೊಂದಿಗೆ ಮಾತನಾಡಿದ್ದಾರೆಂದು ಕಾಂತರಾಜ್ ಗೆ ಅನುಮಾನ ಮೂಡಿದೆ.

ಈ ವಿಚಾರವೇ ದಂಪತಿ ನಡುವೆ ಕಲಹಕ್ಕೆ ಕಾರಣವಾಗಿದೆ. ಮಾತಿಗೆ ಮಾತು ಬೆಳೆದು ಆಕ್ರೋಶಿತನಾದ ಕಾಂತರಾಜ್ ಚೂರಿಯಿಂದ ಪತ್ನಿ ರೂಪಾ ಕತ್ತು ಸೀಳಿ ಹತ್ಯೆ ಮಾಡಿ ಪರಾರಿಯಾಗಿದ್ದಾನೆ. 

ಟ್ಯೂಷನ್‌ಗೆ ಹೋಗಿದ್ದ ಮಗ ಮನೆಗೆ ಬಂದ ಸಂದರ್ಭ ಪ್ರಕರಣ ಬೆಳಕಿಗೆ ಬಂದಿದೆ. ತಕ್ಷಣ ಸ್ಥಳೀಯರು ಸ್ಥಳಕ್ಕೆ ಬಂದು ರೂಪಾರನ್ನು ಆಸ್ಪತ್ರೆಗೆ ಕೊಂಡೊಯ್ದರೂ ಅದಾಗಲೇ ಆಕೆ ಮೃತಪಟ್ಟಿದ್ದರು. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಅನ್ನಪೂಣೇಶ್ವರಿ ನಗರ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪತ್ನಿಯ ಹತ್ಯೆ ಮಾಡಿ ತಲೆ ಮರೆಸಿಕೊಂಡಿರುವ ಆರೋಪಿ ಕಾಂತರಾಜ್‌ಗಾಗಿ ಶೋಧ ಮುಂದುವರೆದಿದೆ. 

Ads on article

Advertise in articles 1

advertising articles 2

Advertise under the article

ಸುರ