-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳೂರು: ಮಾಂಸದ ಆಮಿಷವೊಡ್ಡಿ ಕರೆದೊಯ್ದು ಐದರ ಬಾಲೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ ಧರ್ಮದೇಟು

ಮಂಗಳೂರು: ಮಾಂಸದ ಆಮಿಷವೊಡ್ಡಿ ಕರೆದೊಯ್ದು ಐದರ ಬಾಲೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ ಧರ್ಮದೇಟು

ಮಂಗಳೂರು: ಮಾಂಸ ತಿನ್ನಿಸುವ ಆಮಿಷವೊಡ್ಡಿ ನಿರ್ಜನ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿರುವ ಕಾಮುಕನಿಗೆ ಸ್ಥಳೀಯರು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ಕಿನ್ಯ ಗ್ರಾಮದ ನಡುಕುಮೇರಿನಲ್ಲಿ ನಡೆದಿದೆ. 

ಮೂಲತಃ ಬೆಂಗಳೂರು ಕಲಾಸಿಪಾಳ್ಯ ನಿವಾಸಿ ಸದ್ಯ ಕಲ್ಕಟ್ಟದಲ್ಲಿ ವಾಸಿಸುವ ಆರೀಫ್ ಪಾಷಾ(30) ಬಂಧಿತ ಆರೋಪಿ.

ಕೂಲಿ ಕಾರ್ಮಿಕನಾಗಿದ್ದ ಈತ, ಬಾಲಕಿಯ ತಂದೆಗೆ ಪರಿಚಿತನಾಗಿದ್ದ. ಆರೋಪಿ‌ ಆರೀಫ್ ಬಾಲಕಿಗೆ ಮಾಂಸ ಕೊಡಿಸುವ ನೆಪದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈತನ ಕೃತ್ಯದಿಂದ ಗಾಬರಿಗೊಂಡ ಬಾಲಕಿ ಬೊಬ್ಬೆ ಇಟ್ಟುಕೊಂಡು ಓಡಿ ತಪ್ಪಿಸಿಕೊಂಡು ಬಂದಿದ್ದಾಳೆ. ಈ  ಸಂದರ್ಭ ಅದೇ ದಾರಿಯಲ್ಲಿ ಬೈಕ್ ನಲ್ಲಿ ಬರುತ್ತಿದ್ದ ಸಾಮಾಜಿಕ ಕಾರ್ಯಕರ್ತ ತಲಪಾಡಿಯ ಯಶಸ್ವಿಯಾದ ಪಕ್ಕಳ ಬಾಲಕಿಯನ್ನು  ವಿಚಾರಿಸಿದ್ದಾರೆ.

ಈ ವೇಳೆ ನಡೆದ ಕೃತ್ಯವನ್ನು ಬಾಲಕಿ ತಿಳಿಸುತ್ತಿದ್ದಂತೆ, ಸ್ಥಳೀಯರಿಗೆ ಮಾಹಿತಿ ನೀಡಿದ ಅವರು ಸಹಕಾರದೊಂದಿಗೆ ಆರೋಪಿ ಆರೀಫ್ ಪಾಷಾನಿಗೆ ಧರ್ಮದೇಟು ನೀಡಿ ಉಳ್ಳಾಲ ಠಾಣಾ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.  

ಈತನ ಮೇಲೆ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಆರೋಪಿಯನ್ನು ಬಂಧಿಸಲಾಗಿದೆ.

Ads on article

Advertise in articles 1

advertising articles 2

Advertise under the article