-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ನಾಳೆ (ಅ.13) ಕುದ್ರೋಳಿಗೆ ಬರುವ ಪ್ಲ್ಯಾನ್ ಇದೆಯ?  ಬರುವುದಕ್ಕೆ ಮುಂಚೆ ಈ ಸುದ್ದಿ ನೋಡಿ

ನಾಳೆ (ಅ.13) ಕುದ್ರೋಳಿಗೆ ಬರುವ ಪ್ಲ್ಯಾನ್ ಇದೆಯ? ಬರುವುದಕ್ಕೆ ಮುಂಚೆ ಈ ಸುದ್ದಿ ನೋಡಿ


ಮಂಗಳೂರು: ಮಂಗಳೂರು ದಸರ ಪ್ರಯುಕ್ತ ಕುದ್ರೋಳಿ ಕ್ಷೇತ್ರಕ್ಕೆ ಭಕ್ತರು ನಿರಂತರವಾಗಿ ಬರುತ್ತಿದ್ದಾರೆ. ದಸರದ ಒಂದು ದಿನ ಕುದ್ರೋಳಿ ದೇವಸ್ಥಾನಕ್ಕೆ ಬರುವ ಲೆಕ್ಕಾಚಾರವನ್ನು ‌ಮೊದಲೆ ಮಾಡಿರುತ್ತಾರೆ. ಹೀಗೆ ನಾಳೆ‌( ಅ.13) ರಂದು ಕುದ್ರೋಳಿ ದೇವಸ್ಥಾನಕ್ಕೆ ಬರಬೇಕೆಂದು ನಿರ್ಧರಿಸಿರುವವರು ಈ ಸುದ್ದಿಯನ್ನೊಮ್ಮೆ‌ ಓದಬೇಕು.

ಉಡುಪಿ ಜಿಲ್ಲಾಪ್ರವಾಸಕ್ಕೆ ಬರುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪ್ರವಾಸದ ಕಾರ್ಯಕ್ರಮದಲ್ಲಿ ಪರಿಷ್ಕೃತ ವಾಗಿದ್ದು  ಬುಧವಾರ (ಅ.13) ಸಂಜೆ  ಅವರು ಕುದ್ರೋಳಿ ಕ್ಷೇತ್ರಕ್ಕೆ ಬರಲಿದ್ದಾರೆ.

ಈ ಕಾರಣದಿಂದ ನಾಳೆ ಸಂಜೆ 3 ರಿಂದ 7 ಗಂಟೆಯವರೆಗೆ ಕ್ಷೇತ್ರಕ್ಕೆ ಭಕ್ತಾದಿಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ರಾತ್ರಿ 7.00ರಿಂದ ಎಂದಿನಂತೆ ದರ್ಶನಕ್ಕೆ ಅವಕಾಶ ನೀಡಲಾಗುವುದು ಎಂದು ಆಡಳಿತ ಮಂಡಳಿ ತಿಳಿಸಿದೆ.

ಭದ್ರತಾ ದೃಷ್ಟಿಯಿಂದ ಹಾಗೂ ಹಿರಿಯ ಅಧಿಕಾರಿಗಳ ಸೂಚನೆ ಹಿನ್ನಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು  ಭಕ್ತಾದಿಗಳು ಸಹಕರಿಸಬೇಕೆಂದು ದೇವಳದ ಅಧ್ಯಕ್ಷ ಎಚ್.ಎಸ್. ಸಾಯಿರಾಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





Ads on article

Advertise in articles 1

advertising articles 2

Advertise under the article

ಸುರ