-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಬಡವರ ಕಷ್ಟಕ್ಕಾಗುದಲ್ಲದೆ, ದೇಶವೇ ಹೆಮ್ಮೆ ಪಡುವ ಕಾರ್ಯದಲ್ಲಿ ತೊಡಗಿಸುತ್ತೇನೆಂದು ತನಿಖಾಧಿಕಾರಿಯೊಂದಿಗೆ ಆರ್ಯನ್ ಖಾನ್ ಇಂಗಿತ

ಬಡವರ ಕಷ್ಟಕ್ಕಾಗುದಲ್ಲದೆ, ದೇಶವೇ ಹೆಮ್ಮೆ ಪಡುವ ಕಾರ್ಯದಲ್ಲಿ ತೊಡಗಿಸುತ್ತೇನೆಂದು ತನಿಖಾಧಿಕಾರಿಯೊಂದಿಗೆ ಆರ್ಯನ್ ಖಾನ್ ಇಂಗಿತ


ಮುಂಬೈ: ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿ ಸದ್ಯ ಬಂಧನಕ್ಕೊಳಗಾಗಿರುವ ಬಾಲಿವುಡ್ ಬಾದ್ ಷಾ ಶಾರುಖ್‌ ಖಾನ್‌ ಪುತ್ರ ಆರ್ಯನ್‌ ಖಾನ್‌ನನ್ನು ತನಿಖಾಧಿಕಾರಿಗಳು ತೀವ್ರವಾಗಿ ವಿಚಾರಣೆಗೆ ಒಳಪಡಿಸುತ್ತಿದ್ದಾರೆ.‌ ಅದೇ ರೀತಿ ತನಿಖೆಯಿಂದ ಸಿನಿಮಾರಂಗ ಸೇರಿದಂತೆ ಘಟಾನುಘಟಿಗಳ ಡ್ರಗ್ಸ್‌ ದಂಧೆ ಒಂದೊಂದಾಗಿ ಬೆಳಕಿಗೆ ಬರುತ್ತಿದೆ. ಈ ನಡುವೆ ಆರ್ಯನ್‌ ಖಾನ್‌ ತಾನೊಬ್ಬ ದೇಶದ ಉತ್ತಮ ಪ್ರಜೆಯಾಗಬೇಕು ಎಂಬ ಇಚ್ಛೆಯನ್ನು ತನಿಖಾಧಿಕಾರಿಗಳ ಮುಂದಿಟ್ಟಿದ್ದಾನೆಂದು ತಿಳಿದುಬಂದಿದೆ. 

ಅದೇ ರೀತಿ ಆತ ತಾನು ಇನ್ನೆಂದೂ ಕೆಟ್ಟ ದಾರಿ ತುಳಿಯಲ್ಲ.‌ ಬಡತದಲ್ಲಿರುವವರ ಕಷ್ಟಕ್ಕೆ ಸಹಾಯ ಮಾಡುತ್ತೇನೆ. ಇಡೀ ದೇಶವೇ ಹೆಮ್ಮೆ ಪಡುವ ಕಾರ್ಯದಲ್ಲಿ ತೊಡಗಿಸುತ್ತೇನೆ. ಬಡವರು, ತುಳಿತಕ್ಕೊಳಗಾದವರ ಏಳಿಗೆಗಾಗಿ ಶ್ರಮಿಸುತ್ತೇನೆ, ಒಳ್ಳೆಯ ಕಾರ್ಯಗಳ ಮೂಲಕ ತನ್ನನ್ನು ಗುರುತಿಸಿಕೊಳ್ಳುತ್ತೇನೆಂದು ಆರ್ಯನ್‌ ಖಾನ್ ತನಿಖೆಯ ವೇಳೆ ಹೇಳಿದ್ದಾನೆ ಎಂದು ಮುಂಬೈ ವಲಯದ ನಿರ್ದೇಶಕ ಅಮೀರ್ ವಾಂಖೆಂಡೆ ಮುಂದೆ ಹೇಳಿಕೆ ನೀಡಿರುವುದಾಗಿ ತಿಳಿದುಬಂದಿದೆ.

ಅಲ್ಲದೆ ಆರ್ಯನ್ ಖಾನ್ ನೊಂದಿಗೆ ಎನ್‍ಸಿಬಿ ಮತ್ತು ಸಾಮಾಜಿಕ
 ಕಾರ್ಯಕರ್ತರು ಸಮಾಲೋಚನೆ ನಡೆಸಿದ್ದಾರೆ. ಈ ಸಂದರ್ಭ ಆತ ತಾನೋರ್ವ ಉತ್ತಮ ನಾಗರಿಕನಾಗುವ ಕನಸನ್ನು ಕಾಣುತ್ತಿದ್ದಾನೆ ಎಂದು ಹೇಳಲಾಗುತ್ತಿದೆ.

Ads on article

Advertise in articles 1

advertising articles 2

Advertise under the article

ಸುರ