-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
Bantwal- ಗಾಂಧಿಯವರ ಅಹಿಂಸಾ ಸಿದ್ಧಾಂತ ಯುವಜನರಿಗೆ ಮನವರಿಕೆ: ರೈ ಪ್ರತಿಪಾದನೆ

Bantwal- ಗಾಂಧಿಯವರ ಅಹಿಂಸಾ ಸಿದ್ಧಾಂತ ಯುವಜನರಿಗೆ ಮನವರಿಕೆ: ರೈ ಪ್ರತಿಪಾದನೆ

ಗಾಂಧಿಯವರ ಅಹಿಂಸಾ ಸಿದ್ಧಾಂತ ಯುವಜನರಿಗೆ ಮನವರಿಕೆ: ರೈ ಪ್ರತಿಪಾದನೆ





ರಾಷ್ಟ್ರಪಿತ ಮಹಾತ್ಮಾ ಗಾಂಧಿ ಅವರ ಅಹಿಂಸಾ ಸಿದ್ದಾಂತದ ಬಗ್ಗೆ ಇಂದಿನ ಯುವ ಜನತೆಗೆ ಮನವರಿಕೆ ಮಾಡಿಕೊಡುವ ಅನಿವಾರ್ಯತೆ ಇದೆ ಎಂದು ಮಾಜಿ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಹೇಳಿದರು.



ಬಂಟ್ವಾಳದಲ್ಲಿ ಮಾತನಾಡಿದ ಅವರು, ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಗಾಂಧೀಜಿ ಭಾಗವಹಿಸಿದ ಬಳಿಕ ಚಳವಳಿಗೆ ದೇಶವ್ಯಾಪಿ ವೇಗ ಸಿಕ್ಕಿದರೂ ಎಲ್ಲಿಯೂ ಹಿಂಸೆ, ದೊಂಬಿಗೆ ಪ್ರಚೋದನೆ ನೀಡದೆ ದೇಶಕ್ಕೆ ಸ್ವಾತಂತ್ರ್ಯ ತರುವಲ್ಲಿ ಅವರು ಯಶಸ್ವಿಯಾದದ್ದು ಇತಿಹಾಸ ಎಂದು ನೆನಪಿಸಿದರು.







ಗಾಂಧೀಜಿಯವರ ಸತ್ಯ ಅಹಿಂಸೆ ಸಿದ್ದಾಂತವನ್ನು ಮತ್ತೆ ಪ್ರತಿಪಾದಿಸುವ ಅನಿವಾರ್ಯತೆ ಈಗ ಇದೆ. ವಿವಿಧತೆಯಲ್ಲಿ ಏಕತೆ ಮೂಡಿಸುವ, ಜಾತಿ, ಧರ್ಮ, ಭಾಷೆಗಳನ್ನು ಒಗ್ಗೂಡಿಸಿ ಅಹಿಂಸಾ ಮಾರ್ಗದ ಮೂಲಕ ಸ್ವಾತಂತ್ರ್ಯ ಹೋರಾಟ ಮಾಡುವುದು ಸುಲಭದ ಕೆಲಸವಲ್ಲ. ಮಹಾತ್ಮ ಗಾಂಧಿ ಅದರಲ್ಲಿ ಯಶಸ್ಸು ಕಂಡಿದ್ದಾರೆ. ಇದು ನಮಗೆ ಆದರ್ಶ ಎಂದು ಅವರು ಹೇಳಿದರು.




ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ ಖಾತ್ರಿಯಾಗಬೇಕು ಎಂಬುದು ಗಾಂಧಿ ಕನಸು. ಅವರು ಪ್ರಜಾಸತ್ತೆಯನ್ನು ಬಲಪಡಿಸುವ ಕೆಲಸ ಮಾಡಿದ್ದರು. ಆದರೆ ಈಗ ಪ್ರಜಾಪ್ರಭುತ್ವ ಮೌಲ್ಯ ಕಳೆದುಕೊಳ್ಳುತ್ತಿದೆ ಎಂದು ಅವರು ವಿಷಾದ ವ್ಯಕ್ತಪಡಿಸಿದರು.


Ads on article

🎁 Amazon Prime ಸದಸ್ಯರಾಗಿರಿ

Amazon Prime Offer
👉 ಉಚಿತ shipping, Prime Video, shopping deals—all in one!

Disclosure: ಈ ಲಿಂಕ್ Amazon Affiliate Program ನ ಭಾಗವಾಗಿದೆ. ನೀವು ಈ ಲಿಂಕ್ ಮೂಲಕ Prime ಸದಸ್ಯರಾಗಿದರೆ, ನಮಗೆ commission ಸಿಗಬಹುದು.

Advertise in articles 1

advertising articles 2

Advertise under the article