-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಗಾಳ ಹಾಕಿ ಮೀನು ಹಿಡಿಯುತ್ತಿದ್ದ ಬಾಲಕನನ್ನು ಎಳೆದೊಯ್ದ ಮೊಸಳೆ!

ಗಾಳ ಹಾಕಿ ಮೀನು ಹಿಡಿಯುತ್ತಿದ್ದ ಬಾಲಕನನ್ನು ಎಳೆದೊಯ್ದ ಮೊಸಳೆ!

ಕಾರವಾರ: ನದಿಗೆ ಗಾಳ ಹಾಕಿ ಮೀನು ಹಿಡಿಯುತ್ತಿದ್ದ ಬಾಲಕನನ್ನು ಮೊಸಳೆಯೊಂದು ಎಳೆದೊಯ್ದ ಘಟನೆ ದಾಂಡೇಲಿಯಲ್ಲಿ ಭಾನುವಾರ ನಡೆದಿದೆ. 

ಸ್ಥಳೀಯ ನಿವಾಸಿ ಮೋಹಿನ್ ಮೆಹಬೂಬ್ ಗುಲ್ಬರ್ಗಾವಾಲೆ(16) ಮೊಸಳೆ ಎಳೆದೊಯ್ದ ಬಾಲಕ. 

ಬಾಲಕ ಮೋಹಿನ್ ಮೆಹಬೂಬ್ ಹಳಿಯಾಳ ರಸ್ತೆಯಲ್ಲಿರುವ ಕಾಳಿ ನದಿಯಲ್ಲಿ ಮೀನು ಹಿಡಿಯಲೆಂದು ಗಾಳ ಹಾಕಿ ಕುಳಿತ್ತಿದ್ದ. ಆಗ ಮೊಸಳೆಯೊಂದು ಹಠಾತ್ ದಾಳಿ ನಡೆಸಿ ಆತನನ್ನು ಕಚ್ಚಿ ನೀರಿಗೆ ಎಳೆದೊಯ್ದಿದೆ. 

ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ, ಪೊಲೀಸ್ ಹಾಗೂ ರಿವರ್ ರ್ಯಾಫ್ಟಿಂಗ್ ತಂಡದ ಸದಸ್ಯರು ಆತನಿಗಾಗಿ ಹುಡುಕಾಟ ನಡೆಸುದ್ದಾರೆ. ಅಲ್ಲದೆ ಸೂಪಾ ಅಣೆಕಟ್ಟೆಯಿಂದ ನೀರು ಹೊರ ಬಿಟ್ಟರೆ ಹುಡುಕಾಟಕ್ಕೆ ತೊಂದರೆಯಾಗಲಿದೆ ಎಂಬ ಕಾರಣಕ್ಕೆ ನೀರು ಬಿಡದಂತೆ ಕೆಪಿಸಿಗೆ ವಿನಂತಿಸಲಾಗಿದೆ. 

Ads on article

Advertise in articles 1

advertising articles 2

Advertise under the article

ಸುರ