-->

Job as Govt Pleader at Mangaluru- ದಕ್ಷಿಣ ಕನ್ನಡ: ಸರಕಾರಿ ಅಪರ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ

Job as Govt Pleader at Mangaluru- ದಕ್ಷಿಣ ಕನ್ನಡ: ಸರಕಾರಿ ಅಪರ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ

ದಕ್ಷಿಣ ಕನ್ನಡ: ಸರಕಾರಿ ಅಪರ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ







ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಸರ್ಕಾರಿ ಅಪರ ವಕೀಲರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಸರ್ಕಾರ ಅರ್ಜಿ ಆಹ್ವಾನಿಸಿದೆ.



ಈಗಾಗಲೇ ವಕೀಲ ವೃತ್ತಿಯಲ್ಲಿ ಇರುವ ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.



ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳ ವಿವರ ಹೀಗಿವೆ:


1) ವಿದ್ಯಾರ್ಹತೆ - ಶೈಕ್ಷಣಿಕ ದಾಖಲೆ


2) ಹುಟ್ಟಿದ ದಿನಾಂಕ ದೃಢಪಡಿಸುವ ದಾಖಲೆ,


3) ಜಾತಿ, ವರ್ಗ (ಜಾತಿ ಪ್ರಮಾಣ ಪತ್ರ) ಮತ್ತು


4) 7 ವರ್ಷ ವಕೀಲ ವೃತ್ತಿಯನ್ನು ಪೂರೈಸಿರುವ ದಾಖಲೆ


5) ನ್ಯಾಯಾಲಯದಲ್ಲಿ ವಕಾಲತ್ತು ಮಾಡಿರುವ ಅನುಭವ ಇರುವ ವಿವರ



ಅರ್ಜಿ ಸಲ್ಲಿಸಲು ಕೊನೆಯ ದಿನ: ನವೆಂಬರ್ 15, 2021

ಅರ್ಜಿ ಹಾಗೂ ಪೂರಕ ಮಾಹಿತಿಯನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರ ಕಚೇರಿಯ ಕಾನೂನು ಶಾಖೆಯಲ್ಲಿ ಪಡೆಯಬಹುದು ಎಂದು ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article