-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಕೆಎಸ್ಆರ್​ಟಿಸಿ ಬಸ್ ಅನ್ನೇ ಕದ್ದೊಯ್ದ ಖದೀಮ ಕಳ್ಳರು!

ಕೆಎಸ್ಆರ್​ಟಿಸಿ ಬಸ್ ಅನ್ನೇ ಕದ್ದೊಯ್ದ ಖದೀಮ ಕಳ್ಳರು!

ತುಮಕೂರು: ಲೋಕದಲ್ಲಿ ಎಂಥಂಥಾ ಕಳ್ಳರಿರುತ್ತಾರೆ ಎಂದು ಎಣಿಸಿಕೊಳ್ಳಲು ಸಾಧ್ಯವಿಲ್ಲ. ಇಲ್ಲೊಂದು ಕಡೆ ನಿಲ್ಲಿಸಿರುವ ಕೆಎಸ್ಆರ್​ಟಿಸಿ ಬಸ್ ಅನ್ನೇ ಕಳ್ಳರು ಕದ್ದೊಯ್ದ ಘಟನೆ ನಡೆದಿದೆ.

ಕಳ್ಳರು ಬಸ್ ನಲ್ಲಿ ಹಲವೆಡೆ ಸುತ್ತಾಡಿ ಮತ್ತೆ ಪಕ್ಕದ ಗ್ರಾಮದ ಬಳಿ ಬಿಟ್ಟು ಹೋಗಿದ್ದಾರೆ. ಇಂತಹ ವಿಚಿತ್ರ ಘಟನೆಯೊಂದು ನಡೆದಿರೋದು ತುಮಕೂರು ಜಿಲ್ಲೆ ಗುಬ್ಬಿ ಪಟ್ಟಣದ ಬಸ್ ನಿಲ್ದಾಣದಲ್ಲಿ. 

ಈ ಕೆಎಸ್ಆರ್​ಟಿಸಿ ಬಸ್ ಅನ್ನು ಬಸ್ ನಿಲ್ದಾಣದಲ್ಲಿ ನಿಲ್ಲಿಸಲಾಗಿತ್ತು. ಬಸ್ ನಿಲ್ದಾಣದಿಂದಲೇ ನಿಂತಿರುವ ಬಸ್ ಅನ್ನು ಸೋಮವಾರ ಕಳ್ಳರು ಕದ್ದೊಯ್ದಿದ್ದಾರೆ. ಕುಣಿಗಲ್ ತಾಲೂಕಿನ ಅಮೃತೂರು, ಯಡಿಯೂರು ಸುತ್ತಮುತ್ತಲ ಗ್ರಾಮಗಳ ಸಮೀಪ ಈ ಬಸ್​ ಅನ್ನು ಓಡಾಡಿಸಿದ ಕಳ್ಳರು ಮತ್ತೆ ಗುಬ್ಬಿ ತಾಲೂಕಿನ ಜನ್ನೇನಹಳ್ಳಿ ಗ್ರಾಮದತ್ತ ಬಂದಿದ್ದಾರೆ. ಡೀಸೆಲ್​ ಖಾಲಿಯಾದ ಹಿನ್ನೆಲೆಯಲ್ಲಿ ಬಸ್​ ಅನ್ನು ಜನ್ನೇನಹಳ್ಳಿ ಗ್ರಾಮದ ಬಳಿಯೇ ಬಿಟ್ಟು ಪರಾರಿಯಾಗಿದ್ದಾರೆ. ಗುಬ್ಬಿ ಪಟ್ಟಣದ ಬಸ್​ ನಿಲ್ದಾಣದಲ್ಲಿ ಸಿಸಿಟಿವಿ ಇಲ್ಲದಿರುವುದೇ ಕಳ್ಳರಿಗೆ ಪ್ಲಸ್​ ಪಾಯಿಂಟ್​ ಆಗಿದೆ ಎನ್ನಲಾಗುತ್ತಿದೆ.

Ads on article

Advertise in articles 1

advertising articles 2

Advertise under the article

ಸುರ