-->

ಕೆಎಸ್ಆರ್​ಟಿಸಿ ಬಸ್ ಅನ್ನೇ ಕದ್ದೊಯ್ದ ಖದೀಮ ಕಳ್ಳರು!

ಕೆಎಸ್ಆರ್​ಟಿಸಿ ಬಸ್ ಅನ್ನೇ ಕದ್ದೊಯ್ದ ಖದೀಮ ಕಳ್ಳರು!

ತುಮಕೂರು: ಲೋಕದಲ್ಲಿ ಎಂಥಂಥಾ ಕಳ್ಳರಿರುತ್ತಾರೆ ಎಂದು ಎಣಿಸಿಕೊಳ್ಳಲು ಸಾಧ್ಯವಿಲ್ಲ. ಇಲ್ಲೊಂದು ಕಡೆ ನಿಲ್ಲಿಸಿರುವ ಕೆಎಸ್ಆರ್​ಟಿಸಿ ಬಸ್ ಅನ್ನೇ ಕಳ್ಳರು ಕದ್ದೊಯ್ದ ಘಟನೆ ನಡೆದಿದೆ.

ಕಳ್ಳರು ಬಸ್ ನಲ್ಲಿ ಹಲವೆಡೆ ಸುತ್ತಾಡಿ ಮತ್ತೆ ಪಕ್ಕದ ಗ್ರಾಮದ ಬಳಿ ಬಿಟ್ಟು ಹೋಗಿದ್ದಾರೆ. ಇಂತಹ ವಿಚಿತ್ರ ಘಟನೆಯೊಂದು ನಡೆದಿರೋದು ತುಮಕೂರು ಜಿಲ್ಲೆ ಗುಬ್ಬಿ ಪಟ್ಟಣದ ಬಸ್ ನಿಲ್ದಾಣದಲ್ಲಿ. 

ಈ ಕೆಎಸ್ಆರ್​ಟಿಸಿ ಬಸ್ ಅನ್ನು ಬಸ್ ನಿಲ್ದಾಣದಲ್ಲಿ ನಿಲ್ಲಿಸಲಾಗಿತ್ತು. ಬಸ್ ನಿಲ್ದಾಣದಿಂದಲೇ ನಿಂತಿರುವ ಬಸ್ ಅನ್ನು ಸೋಮವಾರ ಕಳ್ಳರು ಕದ್ದೊಯ್ದಿದ್ದಾರೆ. ಕುಣಿಗಲ್ ತಾಲೂಕಿನ ಅಮೃತೂರು, ಯಡಿಯೂರು ಸುತ್ತಮುತ್ತಲ ಗ್ರಾಮಗಳ ಸಮೀಪ ಈ ಬಸ್​ ಅನ್ನು ಓಡಾಡಿಸಿದ ಕಳ್ಳರು ಮತ್ತೆ ಗುಬ್ಬಿ ತಾಲೂಕಿನ ಜನ್ನೇನಹಳ್ಳಿ ಗ್ರಾಮದತ್ತ ಬಂದಿದ್ದಾರೆ. ಡೀಸೆಲ್​ ಖಾಲಿಯಾದ ಹಿನ್ನೆಲೆಯಲ್ಲಿ ಬಸ್​ ಅನ್ನು ಜನ್ನೇನಹಳ್ಳಿ ಗ್ರಾಮದ ಬಳಿಯೇ ಬಿಟ್ಟು ಪರಾರಿಯಾಗಿದ್ದಾರೆ. ಗುಬ್ಬಿ ಪಟ್ಟಣದ ಬಸ್​ ನಿಲ್ದಾಣದಲ್ಲಿ ಸಿಸಿಟಿವಿ ಇಲ್ಲದಿರುವುದೇ ಕಳ್ಳರಿಗೆ ಪ್ಲಸ್​ ಪಾಯಿಂಟ್​ ಆಗಿದೆ ಎನ್ನಲಾಗುತ್ತಿದೆ.

Ads on article

Advertise in articles 1

advertising articles 2

Advertise under the article