-->

Mangaluru: ಉಳ್ಳಾಲ ಛೋಟಾ ಮಂಗಳೂರು ರಸ್ತೆಯಲ್ಲಿ ಚೂರಿ ಇರಿತ

Mangaluru: ಉಳ್ಳಾಲ ಛೋಟಾ ಮಂಗಳೂರು ರಸ್ತೆಯಲ್ಲಿ ಚೂರಿ ಇರಿತ

ಮಂಗಳೂರು: ನಗರದ ಉಳ್ಳಾಲದಲ್ಲಿರುವ ಛೋಟಾ ಮಂಗಳೂರು ರಸ್ತೆಯಲ್ಲಿ ವ್ಯಕ್ತಿಯೋರ್ವರಿಗೆ ಚೂರಿಯಿಂದ ಇರಿದ ಘಟನೆ ಮಂಗಳವಾರ ಸಂಜೆ ನಡೆದಿದೆ.

ಗ್ಯಾಸ್ ರಿಪೇರಿ ಅಂಗಡಿ ಮಾಲಕ ಹರೀಶ್ ಚೂರಿ ಇರಿಗೊಂಡವರು. ಮೊಗವೀರಪಟ್ನ ನಿವಾಸಿ ವಿಶಾಲ್ ಎಂಬಾತನೇ ಚೂರಿ ಇರಿತ ಕೃತ್ಯದ ಎಂದು ಶಂಕಿಸಲಾಗಿದೆ. 

ವೈಯುಕ್ತಿಕ ದ್ವೇಷದಿಂದ ಈ ಕೃತ್ಯ ಎಸಗಿರುವುದಾಗಿ ಶಂಕೆ ವ್ಯಕ್ತವಾಗಿದೆ. ಘಟನೆ ನಡೆದ ಸ್ಥಳಕ್ಕೆ ಉಳ್ಳಾಲ ಪೊಲೀಸರು ದೌಢಾಯಿಸಿದ್ದು, ಗಾಯಾಳುವನ್ನು ತೊಕ್ಕೊಟ್ಟು ಆಸ್ಪತ್ರೆಗೆ ದಾಖಲಿಸಿದ್ದಾರೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಆರೋಪಿ ವಿಶಾಲ್ ಗಾಗಿ ಹುಡುಕಾಟ ನಡೆಯುತ್ತಿದೆ.

Ads on article

Advertise in articles 1

advertising articles 2

Advertise under the article