-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಸುರತ್ಕಲ್ ನಲ್ಲಿ ಪ್ರಧಾನಿ ಮೋದಿ ಭಾವಚಿತ್ರಕ್ಕೆ ಸೆಗಣಿ ಹಚ್ಚಿದ ವ್ಯಕ್ತಿ ಪತ್ತೆ- ಆತ ಯಾರು ಗೊತ್ತಾ?

ಸುರತ್ಕಲ್ ನಲ್ಲಿ ಪ್ರಧಾನಿ ಮೋದಿ ಭಾವಚಿತ್ರಕ್ಕೆ ಸೆಗಣಿ ಹಚ್ಚಿದ ವ್ಯಕ್ತಿ ಪತ್ತೆ- ಆತ ಯಾರು ಗೊತ್ತಾ?

 

 


 

ಮಂಗಳೂರು:  ಸುರತ್ಕಲ್ ನ ಗೋವಿಂದದಾಸ್ ಕಾಲೇಜಿನ ಬಳಿ ಬಿಜೆಪಿ ವತಿಯಿಂದ ಹಾಕಲಾಗಿದ್ದ ಬ್ಯಾನರ್ ನಲ್ಲಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರಕ್ಕೆ ಸೆಗಣಿ  ಮತ್ತು ಕೆಸರನ್ನು ಬಳಿದ ವ್ಯಕ್ತಿಯನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.

 

ಅಕ್ಟೋಬರ್ 2 ರಂದು ತಡರಾತ್ರಿ ಸುರತ್ಕಲ್ ಗೋವಿಂದ ದಾಸ ಕಾಲೇಜ್ ಬಳಿ ಬಿಜೆಪಿ ವತಿಯಿಂದ ಹಾಕಲಾಗಿದ್ದ ಬ್ಯಾನರ್ ನಲ್ಲಿದ್ದ  ಪ್ರಧಾನ ಮಂತ್ರಿಗಳ ಭಾವಚಿತ್ರಕ್ಕೆ ಸಗಣಿ ಹಾಗೂ ಕೆಸರನ್ನು ಬಳಿಯಲಾಗಿತ್ತು.

 

 ಈ ಬಗ್ಗೆ  ಸುರತ್ಕಲ್ ಪೊಲೀಸ್  ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಘಟನೆಯ ಬಗ್ಗೆ ತನಿಖೆ ನಡೆಸಿದ ಪೊಲೀಸರು ಸಿಸಿಟಿವಿಯನ್ನು ಪರಿಶೀಲಿಸಿದ್ದಾರೆ.




 

ಸಿಸಿ ಟಿವಿಗಳನ್ನು ಪರಿಶೀಲಿಸಿದಾಗ  ಓರ್ವ ಮಾನಸಿಕ ಅಸ್ವಸ್ಥ ವ್ಯಕ್ತಿ ಈ ಕೃತ್ಯ ಎಸಗಿರುವುದು ಕಂಡು ಬಂದಿತ್ತು.  ಪೊಲೀಸರು ಈ ವ್ಯಕ್ತಿಯನ್ನು  ಇಂದು ಪತ್ತೆ ಹಚ್ಚಿದಾಗ ಆತನು ಸಂಪೂರ್ಣ ವಾಗಿ ಮಾನಸಿಕ ಅಸ್ವಸ್ಥನಾಗಿರುವ ಬಗ್ಗೆ ತಿಳಿದುಬಂದಿದೆ.

 

 ಈ ಬಗ್ಗೆ ಮಂಗಳೂರು ಉತ್ತರ  ಎಪಿಪಿ ಹಾಗೂ  ನ್ಯಾಯಾಧೀಶರನ್ನು ಸಂಪರ್ಕಿಸಿ  ಪೊಲೀಸರು ಮಾಹಿತಿ ನೀಡಿದ್ದು ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಅವಶ್ಯಕತೆ ಇಲ್ಲವೆಂದು ತಿಳಿಸಿರುತ್ತಾರೆ.  

 

ಆತನ ಪ್ರಸ್ತುತ ಸ್ಥಿತಿಯ ವಿಡಿಯೋ ಈ ರೀತಿ ಇದೆ.



 

 

Ads on article

Advertise in articles 1

advertising articles 2

Advertise under the article

ಸುರ