-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
murder by husband- ಮಗುವಿಗೆ ಹಾಲುಣಿಸುತ್ತಿರುವಾಗಲೇ ಪತ್ನಿಯ ಕತ್ತು ಕೊಯ್ದ ಕಿರಾತಕ ಪತಿ

murder by husband- ಮಗುವಿಗೆ ಹಾಲುಣಿಸುತ್ತಿರುವಾಗಲೇ ಪತ್ನಿಯ ಕತ್ತು ಕೊಯ್ದ ಕಿರಾತಕ ಪತಿ

ಕಲಬುರಗಿ: ಮುಗುವಿಗೆ ಹಾಲುಣಿಸುತ್ತಿರುವಾಗಲೇ ಪತ್ನಿಯ ಕತ್ತು ಕೊಯ್ದು ಕೊಲೆ ಮಾಡಿರುವ ಅಮಾನುಷ ಘಟನೆ ಕಲಬುರಗಿಯ ರಾಘವೇಂದ್ರ ಕಾಲನಿಯಲ್ಲಿ ಸಂಭವಿಸಿದೆ. ಇದೀಗ ಕಿರಾತಕ ಪತಿ ಪೊಲೀಸರ ಅತಿಥಿಯಾಗಿದ್ದಾನೆ.

ಕಲಬುರಗಿಯ ರಾಘವೇಂದ್ರ ಕಾಲನಿಯ ನಸೀಮಾ ಬೇಗಂ (35) ಮೃತ ದುರ್ದೈವಿ. ಈಕೆಯ ಪತಿ ಇಬ್ರಾಹಿಂ ಕೊಲೆಗೈದಿರುವ ಆರೋಪಿ. 

ವಿಪರೀತ ಮದ್ಯಸೇವನೆಯ ಚಟ ಅಂಟಿಸಿಕೊಂಡಿದ್ದ ಇಬ್ರಾಹೀಂ, ಹಣಕ್ಕಾಗಿ ನಿತ್ಯ ಪತ್ನಿಯನ್ನು ಪೀಡಿಸುತ್ತಿದ್ದ. ಅಲ್ಲದೆ ಆಕೆಯ ತವರು ಮನೆಯಿಂದಲೂ ಹಣ ತರುವಂತೆ ಕಿರುಕುಳ ಕೊಡುತ್ತಿದ್ದನಂತೆ. 

ತವರು ಮನೆಯಿಂದ ದುಡ್ಡು ತರದಿರುವ ಹಿನ್ನೆಲೆಯಲ್ಲಿ ಪತ್ನಿಯನ್ನು ಮಗುವಿಗೆ ಹಾಲು ಕುಡಿಸುವಾಗಲೇ ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪಿ‌ ಇಬ್ರಾಹೀಂನನ್ನು ಪೊಲೀಸರು ಬಂಧಿಸಿದ್ದಾರೆ.

 ಈ ಬಗ್ಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article

ಸುರ