-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಇದೆಂಥಹ ಶಿಕ್ಷೆ! ಕರುಣೆಯೇ ಇಲ್ಲದೆ ವಿದ್ಯಾರ್ಥಿಯನ್ನು ಮೊದಲನೆಯ ಮಹಡಿಯಿಂದ ತಲೆಕೆಳಗಾಗಿಸಿ ನೇತಾಡಿಸುವುದೇ

ಇದೆಂಥಹ ಶಿಕ್ಷೆ! ಕರುಣೆಯೇ ಇಲ್ಲದೆ ವಿದ್ಯಾರ್ಥಿಯನ್ನು ಮೊದಲನೆಯ ಮಹಡಿಯಿಂದ ತಲೆಕೆಳಗಾಗಿಸಿ ನೇತಾಡಿಸುವುದೇ

ಲಖನೌ: ವಿದ್ಯಾರ್ಥಿಯೋರ್ವನು ಶಾಲೆಯಲ್ಲಿ ಚೇಷ್ಟೆ ಮಾಡಿದನೆಂದು ಕೋಪಗೊಂಡ ಶಾಲೆಯ ಸಂಚಾಲಕ  ಮೊದಲನೇ ಮಹಡಿಯ ಮೇಲಿನಿಂದ ಆ ಬಾಲಕನ ಕಾಲು ಹಿಡಿದು ತಲೆಕೆಳಗಾಗಿ ನೇತಾಡಿಸಿ ಶಿಕ್ಷೆ ನೀಡಿರುವ ಆತಂಕಕಾರಿ ಘಟನೆ ವರದಿಯಾಗಿದೆ. 

ಈ ಕೃತ್ಯದ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗುತ್ತಿದ್ದು, ಬಾಲಕನ ತಂದೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ಪೊಲೀಸರು ಸಂಬಂಧಿತ ಶಾಲೆಯ ಸಂಚಾಲಕನನ್ನು ಬಂಧಿಸಿದ್ದಾರೆ. 

ಇಂತಹ ಅಮಾನುಷ ಘಟನೆ ಉತ್ತರಪ್ರದೇಶದ ಮಿರ್ಜಾಪುರ ಜಿಲ್ಲೆಯ ಅಹ್ರೌರ ಪ್ರದೇಶದ ಸದ್ಭಾವನಾ ಶಿಕ್ಷಣ ಸಂಸ್ಥಾನ್ ಶಾಲೆಯಲ್ಲಿ ನಡೆದಿದೆ. 
ಅ.27 ರಂದು ಈ ಶಾಲೆಯ ನರ್ಸರಿ ವಿದ್ಯಾರ್ಥಿ ಸೋನು(5) ಊಟದ ಸಮಯದಲ್ಲಿ​ ಇತರ ವಿದ್ಯಾರ್ಥಿಗಳಿಗೆ ಚೇಷ್ಟೆ ಮಾಡಿದ್ದಾನೆ. ಇದರಿಂದ ಕೋಪಗೊಂಡ ಶಾಲೆಯ ಸಂಚಾಲಕ ಮನೋಜ್​ ವಿಶ್ವಕರ್ಮ, ಆತನನ್ನು ಮೊದಲನೇ ಮಹಡಿಯಿಂದ ಕಾಲು ಹಿಡಿದು ತಲೆಕೆಳಗಾಗಿಸಿ ನೇತಾಡಿಸಿದ್ದಾರೆ. ಬಾಲಕನನ್ನು ಈ ರೀತಿಯಲ್ಲಿ ಬೆದರಿಸುತ್ತಿರುವ ಸಂದರ್ಭದಲ್ಲಿ ಶಾಲೆಯ ಇತರ ಮಕ್ಕಳು ನಿಂತು ನೋಡುತ್ತಿರುವ ಚಿತ್ರವು ವೈರಲ್​ ಆಗಿದೆ. 

ಈ ಬಗ್ಗೆ ಬಾಲಕ ಸೋನುವಿನ ತಂದೆ ರಣಜಿತ್​ ಯಾದವ್​ ಪೊಲೀಸರಿಗೆ ದೂರು ನೀಡಿದ್ದಾರೆ. ಸದರಿ ಶಾಲಾ ಸಂಚಾಲಕನನ್ನು ಅಹ್ರೌರಾ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಜುವಿನೈಲ್​ ಕಾಯ್ದೆಯಡಿ ಪ್ರಕರಣ ದಾಖಲಿಸಿ ವಿಚಾರಣೆ ನಡೆಸುತ್ತಿದ್ದಾರೆ.

Ads on article

Advertise in articles 1

advertising articles 2

Advertise under the article