-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಪುತ್ತೂರಿನಲ್ಲಿ ಸಿಡಿಲಿನ ಆರ್ಭಟ-  ಕೃಷಿಕ ಮೃತ್ಯು

ಪುತ್ತೂರಿನಲ್ಲಿ ಸಿಡಿಲಿನ ಆರ್ಭಟ- ಕೃಷಿಕ ಮೃತ್ಯು



ಪುತ್ತೂರು: ಪುತ್ತೂರಿನಲ್ಲಿ ಸಿಡಿಲಿನ ಆರ್ಭಟಕ್ಕೆ  ಕೃಷಿಕರೊಬ್ಬರು ಮೃತಪಟ್ಟ ಘಟನೆ ನಡೆದಿದೆ.


ದರ್ಬೆತ್ತಡ್ಕ ನಿವಾಸಿ ಕೃಷಿಕ ಪುರುಷೋತ್ತಮ ಪೂಜಾರಿ(47) ಸಾವನ್ನಪ್ಪಿದವರು. ಶುಕ್ರವಾರ ಸಂಜೆ 
 ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ದರ್ಬೆತ್ತಡ್ಕ ಎಂಬಲ್ಲಿ ಈ ಘಟನೆ ನಡೆದಿದೆ. 

ಪುರುಷೋತ್ತಮ ಪೂಜಾರಿ ಅವರು ಶುಕ್ರವಾರ ಸಂಜೆ ಮನೆಯೊಳಗಿದ್ದ ವೇಳೆ ಸಿಡಿಲು ಅವರ ದೇಹಕ್ಕೆ ಬಡಿದಿದೆ. ಇದರಿಂದ ಅವರು ಗಂಭೀರವಾಗಿ ಅಸ್ವಸ್ಥಗೊಂಡಿದ್ದು ತಕ್ಷಣ ಅವರನ್ನು  ಪುತ್ತೂರು ಆಸ್ಪತ್ರೆಗೆ ಕರೆದೊಯ್ದಲಾಗಿತ್ತು.  ಆ ವೇಳೆ ಪುರುಷೋತ್ತಮ ಪೂಜಾರಿ ಅವರು ಮೃತಪಟ್ಟಿದ್ದರು.

ಪುರುಷೋತ್ತಮ ಪೂಜಾರಿ ಅವರು ಪತ್ನಿ , ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಸುಳ್ಯ ಮೂಲದವರಾಗಿರುವ ಪುರುಷೋತ್ತಮ ಪೂಜಾರಿ ದರ್ಬೆತಡ್ಕದಿಂದ ವಿವಾಹವಾಗಿದ್ದು ಇಲ್ಲಿಯೇ ವಾಸವಾಗಿದ್ದರು. ಘಟನೆಯಿಂದ ಮನೆಗೂ ಹಾನಿ ಸಂಭವಿಸಿದೆ.

Ads on article

Advertise in articles 1

advertising articles 2

Advertise under the article

ಸುರ