-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ದಸರಾಕ್ಕೆ ಪತಿ ಮನೆಗೆ ಬರಲಿಲ್ಲ: ಮನನೊಂದ ಪತ್ನಿ ಆತ್ಮಹತ್ಯೆ

ದಸರಾಕ್ಕೆ ಪತಿ ಮನೆಗೆ ಬರಲಿಲ್ಲ: ಮನನೊಂದ ಪತ್ನಿ ಆತ್ಮಹತ್ಯೆ

ನಲ್ಗೊಂಡ: ದಸರಾ ಹಬ್ಬಕ್ಕೆ ಪತಿ ಮನೆಗೆ ಬರಲಿಲ್ಲವೆಂದು ಪತ್ನಿಯೋರ್ವಳು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದ ನಲ್ಗೊಂಡ ಜಿಲ್ಲೆಯ ಅಮಂಗಲ್ಲು ಮೆಡಿಗಡ್ಡದಲ್ಲಿ ನಡೆದಿದೆ.

ತೆಲಂಗಾಣದ ನಲ್ಗೊಂಡ ಜಿಲ್ಲೆಯ ಅಮಂಗಲ್ಲು ಮೆಡಿಗಡ್ಡ ನಿವಾಸಿ ಅನಿಲ್ ಎಂಬವರ ಪತ್ನಿ ವಿದ್ಯಾವತ್ ಮೌನಿಕಾ( 20 ) ಮೃತ ಯುವತಿ.

 ವಿದ್ಯಾವತ್ ಮೌನಿಕಾ ತಮ್ಮ ಮಾವನ ಮಗನಾದ ಅನಿಲ್ ಎಂಬವರನ್ನು ಆರು ತಿಂಗಳ ಹಿಂದೆ ವಿವಾಹವಾಗಿದ್ದರು. ವೃತ್ತಿಯಲ್ಲಿ ಲಾರಿ ಚಾಲಕನಾಗಿರುವ ಅನಿಲ್ ಹಾಗೂ ವಿದ್ಯಾವತ್ ಮೌನಿಕಾ ಒಂದೇ ಗ್ರಾಮದವರಾಗಿದ್ದಾರೆ. 

ಚಾಲಕ ವೃತ್ತಿಯ ಪರಿಣಾಮ ಬೇರೆ ಊರಿಗೆ ಹೋಗಿದ್ದರಿಂದ ಅನಿಲ್ ಗೆ ಮನೆಗೆ ಬರಲು ಸಾಧ್ಯವಾಗಿರಲಿಲ್ಲ. ಪರಿಣಾಮ ಮನನೊಂದ ವಿದ್ಯಾವತ್ ಮೌನಿಕಾ ತೋಟಕ್ಕೆ ತೆರಳಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ವಿಷ ಸೇವಿಸಿ ನರಳಾಡುತ್ತಿದ್ದರುವುದನ್ನು ಕಂಡು ಸ್ಥಳೀಯರು ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದದ್ದರು. ಆದರೆ, ಅದಾಗಲೇ ವಿದ್ಯಾವತ್ ಮೌನಿಕಾ ಮೃತಪಟ್ಟಿರುವುದಾಗಿ ವೈದ್ಯರು ಘೊಷಿಸಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿದಿರು ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ‌. 

Ads on article

🎁 Amazon Prime ಸದಸ್ಯರಾಗಿರಿ

Amazon Prime Offer
👉 ಉಚಿತ shipping, Prime Video, shopping deals—all in one!

Disclosure: ಈ ಲಿಂಕ್ Amazon Affiliate Program ನ ಭಾಗವಾಗಿದೆ. ನೀವು ಈ ಲಿಂಕ್ ಮೂಲಕ Prime ಸದಸ್ಯರಾಗಿದರೆ, ನಮಗೆ commission ಸಿಗಬಹುದು.

Advertise in articles 1

advertising articles 2

Advertise under the article