-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಯುವತಿಯರೊಂದಿಗೆ ಮಂಗಳೂರಿನ ವೈದ್ಯಾಧಿಕಾರಿಯ ಚೆಲ್ಲಾಟ ಪ್ರಕರಣ- ಈತನಿಗೆ 18 ದಿನಗಳ ಹಿಂದೆಯೆ ಸಿಕ್ಕಿತ್ತು ಶಿಕ್ಷೆ! ಏನು ಗೊತ್ತಾ?

ಯುವತಿಯರೊಂದಿಗೆ ಮಂಗಳೂರಿನ ವೈದ್ಯಾಧಿಕಾರಿಯ ಚೆಲ್ಲಾಟ ಪ್ರಕರಣ- ಈತನಿಗೆ 18 ದಿನಗಳ ಹಿಂದೆಯೆ ಸಿಕ್ಕಿತ್ತು ಶಿಕ್ಷೆ! ಏನು ಗೊತ್ತಾ?





ಮಂಗಳೂರು: ದ.ಕ.ಜಿಲ್ಲೆಯ ಕುಷ್ಠರೋಗ ನಿವಾರಣಾಧಿಕಾರಿ ಡಾ.ರತ್ನಾಕರ್ ತನ್ನ ಕಚೇರಿಯ ಮಹಿಳಾ ಸಿಬ್ಬಂದಿಯೊಂದಿಗೆ ಕಾಮದಾಟ ಆಡಿರುವ ಫೋಟೋ, ವೀಡಿಯೋ ವೈರಲ್ ಆಗಿದೆ. ಈತ ಕಚೇರಿಯ 9 ಮಹಿಳಾ ಸಿಬ್ಬಂದಿಯೊಂದಿಗೆ ಚೆಲ್ಲಾಟವಾಡಿರೋದು ಬಯಲಾಗಿದೆ.



ಈತನ ಅನುಚಿತ ವರ್ತನೆಯ ಬಗ್ಗೆ ದ.ಕ.ಜಿಲ್ಲಾ ಆರೋಗ್ಯಾಧಿಕಾರಿಗೆ ದೂರು ಬಂದಿತ್ತು. ಈ ಬಗ್ಗೆ ಹಿರಿಯ ಆರೋಗ್ಯ ಅಧಿಕಾರಿಯೋರ್ವರ ಆಂತರಿಕ ದೂರು ಸಮಿತಿಯಲ್ಲಿ ತನಿಖೆ ನಡೆದಿತ್ತು. ಪ್ರಾಥಮಿಕ ತನಿಖೆಯಲ್ಲಿ ಈತ ಅನುಚಿತವಾಗಿ ವರ್ತಿಸಿರೋದು ಕಂಡು ಬಂದಿದೆ.



 ಈ
ಹಿನ್ನೆಲೆಯಲ್ಲಿ ಸರಕಾರಕ್ಕೆ ಶಿಸ್ತು ಕ್ರಮಕ್ಕೆ ಕಳುಹಿಸಲಾಗುತ್ತು.‌ ಈ ಹಿನ್ನೆಲೆಯಲ್ಲಿ ನ.8ರಂದು ರಾಜ್ಯ ಆರೋಗ್ಯ ಇಲಾಖೆ ಡಾ.ರತ್ನಾಕರ್ ನನ್ನು ಅಮಾನತು ಮಾಡಿ ಆದೇಶಿಸಿದೆ.



ಕಚೇರಿಯಲ್ಲಿ ಈತ ಸಾಕಷ್ಟು ಮಹಿಳಾ ಸಿಬ್ಬಂದಿಯನ್ನು ತನ್ನ ಕಾಮದಾಟಕ್ಕೆ ಬಳಸುತ್ತಿದ್ದ. ಈ ಬಗ್ಗೆ ಸಹಕರಿಸದ ಸಿಬ್ಬಂದಿಗೆ ತೊಂದರೆ ಕೊಡುತ್ತಿದ್ದ ಎಂದು ತಿಳಿದು ಬಂದಿದೆ‌. ಈ ಹಿನ್ನೆಲೆಯಲ್ಲಿ ‌ಕೆಲ ಮಹಿಳಾ ಸಿಬ್ಬಂದಿ ದೂರು ನೀಡಿದ್ದರು. ಅಲ್ಲದೆ ಈ ಬಗ್ಗೆ ಸಾಕಷ್ಟು ಅನಾಮಧೇಯ ಕರೆಗಳು ಬಂದಿತ್ತು.



ಅಲ್ಲದೆ ಆತ ಆಸ್ಪತ್ರೆಯ ಬಿಲ್ ವಿಚಾರದಲ್ಲೂ ಅಕ್ರಮ ಎಸಗಿರುವುದು ಕಂಡು ಬಂದಿದೆ ಎನ್ನಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ.



Ads on article

Advertise in articles 1

advertising articles 2

Advertise under the article

ಸುರ