-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಅಂಗಡಿ ಮುಂಭಾಗ ಇರಿಸಿರುವ 48 ಲೀ. ಹಾಲನ್ನು ಎಗರಿಸಿ ಪರಾರಿಯಾದ ಖದೀಮರು: ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

ಅಂಗಡಿ ಮುಂಭಾಗ ಇರಿಸಿರುವ 48 ಲೀ. ಹಾಲನ್ನು ಎಗರಿಸಿ ಪರಾರಿಯಾದ ಖದೀಮರು: ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

ಚಿಕ್ಕಮಗಳೂರು: ಚಿನ್ನಾಭರಣ, ನಗದು, ಬೆಲೆಬಾಳುವ ವಸ್ತುಗಳನ್ನು ಕಳ್ಳರು ಎಗರಿಸೋದನ್ನು ನಾವು ಕೇಳಿರುತ್ತೇವೆ. ಆದರೆ ಮೂಡಿಗೆರೆ ತಾಲೂಕಿನ ಜನ್ನಾಪುರದಲ್ಲಿ ಖದೀಮ ಕಳ್ಳರು ಕಾರಿನಲ್ಲಿ ಬಂದ ಅಂಗಡಿ ಮುಂಭಾಗ ಇರಿಸಿರುವ 48 ಲೀಟರ್ ಹಾಲನ್ನೇ ಎಗರಿಸಿರುವ ಘಟನೆ  ನಡೆದಿದೆ.

ಗೋಣಿಬೀಡು ಹೋಬಳಿಯ ಕರುಣಾಕರ ಎಂಬುವರ ಅಂಗಡಿಗೆಂದು ಇರಿಸಲಾಗಿದ್ದ 48 ಲೀಟರ್ ಹಾಲನ್ನು ಖದೀಮ ಕಳ್ಳರು ಎಗರಿಸಿದ್ದಾರೆ. ಇದರ ಸಂಪೂರ್ಣ ದೃಶ್ಯ ಸಿಸಿ ಕ್ಯಾಮರಾದಲ್ಲಿ  ದಾಖಲಾಗಿದೆ.

ಬೆಳಗ್ಗೆ 4 ಗಂಟೆ ಸುಮಾರಿಗೆ ಕಾರಿನಲ್ಲಿ ಬಂದಿರುವ ಈ ಖದೀಮರು ಅಂಗಡಿ ಎದುರು ಇಟ್ಟಿದ್ದ ಹಾಲಿನ ಟ್ರೇಯಲ್ಲಿ ಕೆಲವನ್ನು ತಮ್ಮ ಕಾರಿನಲ್ಲಿರಿಸಿ ಬೇಲೂರು ಮಾರ್ಗದ ಕಡೆಗೆ ಪರಾರಿಯಾಗಿದ್ದಾರೆ. ಹಾಲು ಕಳವುಗೈದಿರುವ ಸಂಪೂರ್ಣ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಈ ಬಗ್ಗೆ ಗೋಣಿಬೀಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article

ಸುರ