-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ರವಿವಾರ ರಾಜ್ಯಾದ್ಯಂತ ಎಲ್ಲಾ ಸಿನಿಮಾ ಮಂದಿರಗಳ ಆವರಣದಲ್ಲಿ 'ಅಪ್ಪು'ವಿಗೆ ‘ಪುಷ್ಪಾಂಜಲಿ, ದೀಪಾಂಜಲಿ, ಗೀತಾಂಜಲಿ, ಭಾಷ್ಪಾಂಜಲಿ’

ರವಿವಾರ ರಾಜ್ಯಾದ್ಯಂತ ಎಲ್ಲಾ ಸಿನಿಮಾ ಮಂದಿರಗಳ ಆವರಣದಲ್ಲಿ 'ಅಪ್ಪು'ವಿಗೆ ‘ಪುಷ್ಪಾಂಜಲಿ, ದೀಪಾಂಜಲಿ, ಗೀತಾಂಜಲಿ, ಭಾಷ್ಪಾಂಜಲಿ’


ಬೆಂಗಳೂರು: ವರನಟನ ಪುತ್ರ, ಚಂದನವನದ ಎಲ್ಲರ ಮೆಚ್ಚಿನ ನಟ ಪುನೀತ್ ರಾಜಕುಮಾರ್ ಅವರ ಹಠಾತ್ ನಿಧನದ ಹಿನ್ನೆಲೆಯಲ್ಲಿ ರವಿವಾರ ರಾಜ್ಯಾದ್ಯಂತ ಏಕಕಾಲಕ್ಕೆ ಬೃಹತ್ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಲಿದೆ. 

ಕನ್ನಡ ಚಿತ್ರ ಪ್ರದರ್ಶನಕಾರರ ನೇತೃತ್ವದಲ್ಲಿ ನಡೆಯಲಿರುವ ಈ ಕಾರ್ಯಕ್ರಮಕ್ಕೆ ‘ಪುಷ್ಪಾಂಜಲಿ, ದೀಪಾಂಜಲಿ, ಗೀತಾಂಜಲಿ, ಭಾಷ್ಪಾಂಜಲಿ’ ಎಂದು ಹೆಸರಿಡಲಾಗಿದೆ. ಈ ಕಾರ್ಯಕ್ರಮದಲ್ಲಿ ರಾಜ್ಯದ ಚಿತ್ರಪ್ರದರ್ಶಕರ ಜತೆಗೆ ಅಲ್ಲಿನ ಸಿಬ್ಬಂದಿ ವರ್ಗ, ಸಿನಿಮಾ ಪ್ರೇಕ್ಷಕರು, ಅಭಿಮಾನಿಗಳು ಕೂಡ ಕೈಜೋಡಿಸಲಿದ್ದಾರೆ. 

ನ.7ರ ರವಿವಾರ ಸಂಜೆ 6 ಗಂಟೆಗೆ ಸರಿಯಾಗಿ ರಾಜ್ಯದ ಎಲ್ಲ ಸಿನಿಮಾ ಮಂದಿರಗಳ ಆವರಣದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಈ ಸಂದರ್ಭ ಹೂವು, ದೀಪ, ಗೀತನಮನಗಳ ಮೂಲಕ ನಟ ಅಪ್ಪುವಿಗೆ ಭಾಷ್ಪಾಂಜಲಿ ಅರ್ಪಿಸಲಾಗುವುದು ಎಂದು ಕರ್ನಾಟಕ ಚಿತ್ರ ಪ್ರದರ್ಶಕರ ಸಂಘದ ಅಧ್ಯಕ್ಷ ಕೆ.ವಿ. ಚಂದ್ರಶೇಖರ ಅವರು ತಿಳಿಸಿದ್ದಾರೆ. 

ಗೀತಾಂಜಲಿ: ನಟ ಪುನೀತ್ ರಾಜ್‍ಕುಮಾರ್ ಅವರಿಗೆ ಗೀತನಮನ ಮೂಲಕ ಶ್ರದ್ಧಾಂಜಲಿ ಅರ್ಪಿಸಲೆಂದೇ ಖ್ಯಾತ ಚಿತ್ರಸಾಹಿತಿ ಡಾ.ವಿ.ನಾಗೇಂದ್ರ ಪ್ರಸಾದ್‌  ವಿಶೇಷ ಗೀತೆಯೊಂದನ್ನು ರಚಿಸಿದ್ದಾರೆ. ʼಬೆಳ್ಳಿ ಬಾನಿನಲ್ಲಿ ಸೇರಿ ಹೋದೆ ಅಪ್ಪು..ʼ ಎಂದು ಆರಂಭವಾಗುವ ಈ ಗೀತೆಯನ್ನು ರವಿವಾರ ಸಂಜೆ ಎಲ್ಲ ಚಿತ್ರಮಂದಿರಗಳ ಆವರಣದಲ್ಲಿ ಸಾಮೂಹಿಕವಾಗಿ ಹಾಡಲಾಗುವುದು. ಬಳಿಕ 2 ನಿಮಿಷಗಳ ಮೌನಪ್ರಾರ್ಥನೆ ಮೂಲಕ ಪುನೀತ್‌ ರಾಜಕುಮಾರ್‌ ಅವರ ಆತ್ಮಕ್ಕೆ ಶಾಂತಿ ಕೋರಲಾಗುವುದು ಎಂದು ಕೆ.ವಿ.ಚಂದ್ರಶೇಖರ ಅವರು ತಿಳಿಸಿದ್ದಾರೆ. 

Ads on article

Advertise in articles 1

advertising articles 2

Advertise under the article

ಸುರ