-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಕಚೇರಿಯ ಯುವತಿಯರೊಂದಿಗೆ ವೈದ್ಯಾಧಿಕಾರಿ ರಾಸಲೀಲೆ ಪ್ರಕರಣ- ಜಾಮೀನು ವಿಚಾರ ಏನಾಯಿತು ಅಂದರೆ...

ಕಚೇರಿಯ ಯುವತಿಯರೊಂದಿಗೆ ವೈದ್ಯಾಧಿಕಾರಿ ರಾಸಲೀಲೆ ಪ್ರಕರಣ- ಜಾಮೀನು ವಿಚಾರ ಏನಾಯಿತು ಅಂದರೆ...

ಮಂಗಳೂರು:  ಕಚೇರಿಯ ಹಲವು ಯುವತಿಯರೊಂದಿಗೆ ರಾಸಲೀಲೆಯಲ್ಲಿ ತೊಡಗಿ ಪೊಲೀಸರಿಂದ ಬಂಧನಕ್ಕೊಳಗಾದ ವೈದ್ಯಾಧಿಕಾರಿ ಡಾ ರತ್ನಾಕರ್ ಗೆ ಜಾಮೀನು ದೊರೆತಿದೆ.

ಇಂದು ಮೂರನೇ ಜೆ ಎಂ ಎಫ್ ಸಿ ನ್ಯಾಯಾಲಯದಲ್ಲಿ ಡಾ ರತ್ನಾಕರ್ ಜಾಮೀನು ಅರ್ಜಿ ವಿಚಾರಣೆಗೆ ಬಂದು ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.

ಡಾ ರತ್ನಾಕರ್ ಕುಷ್ಠರೋಗ ನಿವಾರಣಾಧಿಕಾರಿ ಮತ್ತು ಆಯುಷ್ಮಾನ್ ವಿಭಾಗದ ನೋಡಲ್ ಅಧಿಕಾರಿಯಾಗಿದ್ದು ಕಚೇರಿಯ ಮಹಿಳಾ ಸಿಬ್ಬಂದಿ ಜೊತೆಗೆ ಅನುಚಿತವಾಗಿ ವರ್ತಿಸುತ್ತಿದ್ದರು.  ಇವರ ವರ್ತನೆ ಬಗ್ಗೆ ಇಲಾಖೆ ಗಮನಕ್ಕೆ ಬಂದು ನವೆಂಬರ್ 8 ರಂದು ಅಮಾನತು ಮಾಡಲಾಗಿತ್ತು. ಎರಡು ದಿನಗಳ ಹಿಂದೆ ರತ್ನಾಕರ್ ಅವರು‌ ಮಹಿಳೆಯರೊಂದಿಗೆ ಅನುಚಿತವಾಗಿ ವರ್ತಿಸುವ ವಿಡಿಯೋ ಮತ್ತು ಪೊಟೋ ವೈರಲ್ ಆಗಿ ಪ್ರಕರಣ ಬೆಳಕಿಗೆ ಬಂದಿತ್ತು. ಆ ಬಳಿಕ ದೂರು ಸ್ವೀಕರಿಸಿದ ‌ಪೊಲೀಸರು ಡಾ. ರತ್ನಾಕರ್ ನನ್ನು ಬಂಧಿಸಿದ್ದರು. ಇದೀಗ ನ್ಯಾಯಾಲಯ ಡಾ ರತ್ನಾಕರ್ ಗೆ ಜಾಮೀನು ‌ಮಂಜೂರು ಮಾಡಿದೆ.

Ads on article

Advertise in articles 1

advertising articles 2

Advertise under the article