-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಚಲಿಸುತ್ತಿದ್ದ ರೈಲಿನ ಬಾಗಿಲ ಬಳಿ ನಿಂತು ಸೆಲ್ಫಿ ತೆಗೆದಿರುವುದೇ ಮುಳುವಾಯಿತು: ವಾರದ ಬಳಿಕ ಯುವಕನ ಮೃತದೇಹ ನದಿಯಲ್ಲಿ ‌ಪತ್ತೆ

ಚಲಿಸುತ್ತಿದ್ದ ರೈಲಿನ ಬಾಗಿಲ ಬಳಿ ನಿಂತು ಸೆಲ್ಫಿ ತೆಗೆದಿರುವುದೇ ಮುಳುವಾಯಿತು: ವಾರದ ಬಳಿಕ ಯುವಕನ ಮೃತದೇಹ ನದಿಯಲ್ಲಿ ‌ಪತ್ತೆ

ಬೆಂಗಳೂರು: ಚಲಿಸುತ್ತಿದ್ದ ರೈಲಿನ ಬಾಗಿಲ ಬಳಿ ನಿಂತು ಮಧ್ಯರಾತ್ರಿ ಸೆಲ್ಫಿ ತೆಗೆಯಲು ಹೋದ ಯುವಕನೋರ್ವ ನದಿಗೆ ಬಿದ್ದು ಮೃತಪಟ್ಟ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. 

ಮೂಲತಃ ಮಂಡ್ಯ ಜಿಲ್ಲೆ ನಿವಾಸಿ, ಬೆಂಗಳೂರಿನ ಗಾಂಧಿ ನಗರದ ಬಾರ್​ವೊಂದರಲ್ಲಿ ಕೆಲಸ ಮಾಡುತ್ತಿದ್ದ ಅಭಿಷೇಕ್(19) ಮೃತ ದುರ್ದೈವಿ.  

ಅಭಿಷೇಕ್​ ನ.6ರಂದು ದೇವಸ್ಥಾನದಕ್ಕೆಂದು  ಪಾಂಡವಪುರಕ್ಕೆ ಸ್ನೇಹಿತರೊಂದಿಗೆ ಮೆಜೆಸ್ಟಿಕ್‌ನಿಂದ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ಈ ನಡುವೆ ಅವರು ರೈಲಿನ ಬಾಗಿಲ ಬಳಿ ನಿಂತು ಸೆಲ್ಫಿ ತೆಗೆಯುತ್ತಿದ್ದ ಸಂದರ್ಭ ನಾಪತ್ತೆಯಾಗಿದ್ದರು. ಆದರೆ ಜತೆಗಿದ್ದ ಸ್ನೇಹಿತರಿಗೆ ಏನಾಗಿದೆ? ಅನ್ನೋದು ಗೊತ್ತಾಗಿರಲಿಲ್ಲ. ಅವರು ಪಾಂಡವಪುರ ರೈಲು ನಿಲ್ದಾಣದಲ್ಲಿ ಇಳಿದು ಹುಡುಕಾಟ ನಡೆಸಿದ್ದರೂ ಅಭಿಷೇಕ್​ ಸುಳಿವು ಪತ್ತೆಯಾಗಿರಲಿಲ್ಲ. 

ಬಳಿಕ ಅವರೆಲ್ಲ ವಾಪಾಸ್ ಊರಿಗೆ ಹೋಗಿದ್ದರು. ಎರಡು ದಿನವಾದರೂ ಅಭಿಷೇಕ್ ಬಾರದ ಹಿನ್ನೆಲೆಯಲ್ಲಿ ಆತಂಕಗೊಂಡ ಮನೆಯವರು ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್​ ಠಾಣೆಯಲ್ಲಿ ಮಿಸ್ಸಿಂಗ್ ಕಂಪ್ಲೇಟ್ ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಇನ್​ಸ್ಪೆಕ್ಟರ್ ಪುಟ್ಟಸ್ವಾಮಿ ನೇತೃತ್ವದ ತಂಡ ಪಾಂಡವಪುರಕ್ಕೆ ರೈಲಿನಲ್ಲಿ ಹೋಗಿರುವ ಬಗ್ಗೆ ಸ್ನೇಹಿತರಿಂದ ಮಾಹಿತಿ ಸಂಗ್ರಹಿಸಿ, ಮಂಡ್ಯ ಪೊಲೀಸರಿಗೆ ಹಾಗೂ ಸ್ಥಳೀಯ ಅಗ್ನಿಶಾಮಕದಳಕ್ಕೂ ಮಾಹಿತಿ ನೀಡಿದ್ದರು. ಸತತ 4-5 ದಿನಗಳಿಂದ ಹುಡುಕಾಟ ನಡೆಸಿದ್ದರೂ ಅಭಿಷೇಕ್  ಸುಳಿವು ಪತ್ತೆಯಾಗಿರಲಿಲ್ಲ.‌  

ವಿಚಾರಣೆ ವೇಳೆ ಸ್ನೇಹಿತರು, ಆತ ರೈಲಿನ ಬಾಗಿಲ ಬಳಿ ಸೆಲ್ಫಿ ತೆಗೆಯುತ್ತಿದ್ದ ಮಾಹಿತಿಯನ್ನು ಆಧರಿಸಿ ತನಿಖೆ ಕೈಗೊಂಡ ಪೊಲೀಸರಿಗೆ ರೈಲ್ವೆ ಬ್ರಿಡ್ಜ್​ನ ಕಂಬಿ ತಾಗಿ ಅಭಿಷೇಕ್ ಲೋಕಪಾವನಿ ನದಿಗೆ  ಬಿದ್ದಿರಬಹುದು ಎಂಬ ಶಂಕೆ‌ ಮೂಡಿತ್ತು. ಅದರಂತೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯ ಮೀನುಗಾರರ ಸಹಾಯದಿಂದ ಪೊಲೀಸರು ಸತತ ಮೂರು ದಿನಗಳ ಕಾಲ ಶೋಧ ನಡೆಸಿದ್ದಾರೆ. ನ.14ರಂದು ಶ್ರೀರಂಗಪಟ್ಟಣದಿಂದ 6 ಕಿ.ಮೀ. ದೂರ ನದಿಯಲ್ಲಿ ಅಭಿಷೇಕ್ ಮೃತದೇಹ ಪತ್ತೆಯಾಗಿದೆ. 

ಈ ಬಗ್ಗೆ ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಪೋಷಕರಿಗೆ ಒಪ್ಪಿಸಲಾಗಿದೆ. ಎಂದು ನಗರ ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ ಪಾಟೀಲ್ ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ