-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಆಡುತ್ತಿದ್ದ ಬಾಲಕ ವಿದ್ಯುತ್ ಆಘಾತಕ್ಕೆ ಬಲಿ: ಅಟ್ಟಹಾಸ ಮೆರೆದ ಜವರಾಯ!

ಆಡುತ್ತಿದ್ದ ಬಾಲಕ ವಿದ್ಯುತ್ ಆಘಾತಕ್ಕೆ ಬಲಿ: ಅಟ್ಟಹಾಸ ಮೆರೆದ ಜವರಾಯ!

ಹಾವೇರಿ: ಇತ್ತೀಚೆಗೆ ಬೆಂಗಳೂರಿನಲ್ಲಿ ಇಬ್ಬರು ಬಾಲಕರು ವಿದ್ಯುತ್ ಆಘಾತಕ್ಕೆ ಬಲಿಯಾಗಿರುವ ಘಟನೆ ನೆನಪಿನಿಂದ ಮರೆಯಾಗುವ ಮುಂಚೆಯೇ ಹಾವೇರಿ ತಾಲ್ಲೂಕಿನ ಯಲಗಚ್ಚ ಗ್ರಾಮದಲ್ಲಿ ಇಂತಹದ್ದೇ ಒಂದು ಘಟನೆ ನಡೆದಿದೆ.

ಶಾಲೆಗೆ ರಜೆಯಿದ್ದ ಹಿನ್ನೆಲೆಯಲ್ಲಿ ಗೆಳೆಯರೊಂದಿಗೆ ಆಡುತ್ತಿದ್ದ ಬಾಲಕನೊಬ್ಬ ವಿದ್ಯುತ್​ ತಂತಿ ಸ್ಪರ್ಶಿಸಿ ಸ್ಥಳದಲ್ಲೇ ಮೃತಪಟ್ಟಿದ್ದು, ಮನೆಯವರ ಆಕ್ರಂದನ ಮುಗಿಲು ಮುಟ್ಟಿದೆ.

ಹಾವೇರಿ ತಾಲ್ಲೂಕಿನ ಯಲಗಚ್ಚ ಗ್ರಾಮದ ಚೇತನ್ ಕಂಬಳಿ (14)ಮೃತ ಬಾಲಕ. ಮೂಲತಃ ನೆಗಳೂರು ಗ್ರಾಮದ ನಿವಾಸಿಯಾದ ಚೇತನ್​, ವಿದ್ಯಾಭ್ಯಾಸದ ಹಿನ್ನೆಲೆಯಲ್ಲಿ ಅಜ್ಜ-ಅಜ್ಜಿಯ ಊರಾದ ಯಲಗಚ್ಚದಲ್ಲಿ ವಾಸಿಸುತ್ತಿದ್ದ.

ಶಾಲೆಗೆ ರಜೆಯಿರುವ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಮೇಲೆ ಗೆಳೆಯರೊಂದಿಗೆ ಚೇತನ್ ಆಟವಾಡುತ್ತಿದ್ದ. ಆ ವೇಳೆ ಆಕಸ್ಮಿಕವಾಗಿ ಆತನಿಗೆ ವಿದ್ಯುತ್​ ತಂತಿ ಸ್ಪರ್ಶಿಸಿದೆ. ಪರಿಣಾಮ ಆತ ಸ್ಥಳದಲ್ಲಿಯೇ ಪ್ರಾಣಬಿಟ್ಟಿದ್ದಾನೆ. ಗುತ್ತಲ ಠಾಣೆಯ ಪೊಲೀಸರು ಮಾಹಿತಿ ನೀಡಿದ್ದಾರೆ. 

Ads on article

Advertise in articles 1

advertising articles 2

Advertise under the article