-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಕಡಬ: ಕಡ್ಯ ಕೊಣಾಜೆ ಪ್ರದೇಶದಲ್ಲಿ ಹಾಡಹಗಲೇ ಕಾಡಾನೆಯ ಹಿಂಡು ಮನೆಯ ಅಂಗಳದ ತೋಟಕ್ಕೆ ಲಗ್ಗೆ

ಕಡಬ: ಕಡ್ಯ ಕೊಣಾಜೆ ಪ್ರದೇಶದಲ್ಲಿ ಹಾಡಹಗಲೇ ಕಾಡಾನೆಯ ಹಿಂಡು ಮನೆಯ ಅಂಗಳದ ತೋಟಕ್ಕೆ ಲಗ್ಗೆ

ಸುಬ್ರಹ್ಮಣ್ಯ: ಹಾಡಹಗಲೇ ಕಾಡಾನೆಯ ಹಿಂಡು ಮನೆಯ ಅಂಗಳದ ತೋಟಕ್ಕೆ ಲಗ್ಗೆ ಇಟ್ಟು ಜನರನ್ನು ಭೀತಿಗೊಳಿಸುತ್ತಿರುವ ಘಟನೆ ಕಡಬ ತಾಲೂಕಿನ ಕಡ್ಯ ಕೊಣಾಜೆ ವ್ಯಾಪ್ತಿಯಲ್ಲಿ ಸಂಭವಿಸಿದೆ.

ಸುಬ್ರಹ್ಮಣ್ಯ ವಲಯ ಅರಣ್ಯ ವ್ಯಾಪ್ತಿಯ ಕಡ್ಯ ಪ್ರದೇಶದಲ್ಲಿ ಕಾಡಾನೆ ರಾತ್ರಿ ಮಾತ್ರವಲ್ಲದೆ ಹಾಡ ಹಗಲಲ್ಲೂ ತೋಟಕ್ಕೆ ನುಗ್ಗಿ ಕೃಷಿ ನಾಶ ಪಡಿಸುತ್ತಿದೆ‌. ಈ ಬಗ್ಗೆ ಅರಣ್ಯ ಇಲಾಖೆಗೆ ದೂರುಗಳು ಬರುತ್ತಿವೆ.

ರವಿಪ್ರಸಾದ್ ಭಟ್ ಗುಜ್ಜಲ, ನರಸಿಂಹ ಭಟ್ ಪೆರಡೆ, ಮಧುಸೂದನ್ ಭಟ್ ಕಡ್ಯ, ನಾಗರಾಜ್ ಭಟ್ ಕಡ್ಯ, ರವೀಂದ್ರ ಬತ್ತಿಲ್ ಹಾಗೂ ಇತರರ ತೋಟಕ್ಕೆ ಲಗ್ಗೆ ಇಟ್ಟಿರುವ ಕಾಡಾನೆ ನೂರಾರು ಅಡಿಕೆ ಗಿಡ, ಬಾಳೆ, ಇತರೆ ಕೃಷಿಗಳನ್ನು ನಾಶ ಪಡಿಸಿದೆ.

Ads on article

Advertise in articles 1

advertising articles 2

Advertise under the article

ಸುರ