-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಶಾಲೆಗೆ ಹೋಗಿದ್ದ ಬಾಲಕಿ ನಿವೃತ್ತ ಮುಖ್ಯ ಶಿಕ್ಷಕರ ಬಾವಿಯಲ್ಲಿ ಮೃತದೇಹವಾಗಿ ಪತ್ತೆ

ಶಾಲೆಗೆ ಹೋಗಿದ್ದ ಬಾಲಕಿ ನಿವೃತ್ತ ಮುಖ್ಯ ಶಿಕ್ಷಕರ ಬಾವಿಯಲ್ಲಿ ಮೃತದೇಹವಾಗಿ ಪತ್ತೆ

ಮಾಗಡಿ: ಶಾಲೆಗೆ ಹೋಗಿದ್ದ ಬಾಲಕಿಯೋರ್ವಳು ನಿವೃತ್ತ ಮುಖ್ಯ ಶಿಕ್ಷಕರೊಬ್ಬರ ತೋಟದ ಬಾವಿಯಲ್ಲಿ ಮೃತದೇಹವಾಗಿ ಪತ್ತೆಯಾಗಿದ್ದಾಳೆ. ಇದೀಗ ಈಕೆಯ ಸಾವು ಬಹಳಷ್ಟು ಸುತ್ತ ಅನುಮಾನಗಳಿಗೆ ಎಡೆ ಮಾಡಿದೆ. 

ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಅಗಲಕೋಟೆ ಹ್ಯಾಂಡ್​ಪೋಸ್ಟ್​ ಬಳಿಯ ತಿಟ್ಟಮೇಗಲ ಪಾಳ್ಯದ ಯಶೋದಮ್ಮ ಎಂಬಾಕೆಯ ಪುತ್ರಿ ಲಕ್ಷ್ಮಿ(14) ಮೃತ ಬಾಲಕಿ.

ಸಾತನೂರು ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಲಕ್ಷ್ಮೀ, ಸೋಮವಾರ ಬೆಳಗ್ಗೆ ಶಾಲೆಗೆ ಹೋದವಳು ಮತ್ತೆ ಮರಳಿ ಮನೆಗೆ ವಾಪಸಾಗಿರಲಿಲ್ಲ. ಇದರಿಂದ ಗಾಬರಿಗೊಂಡ ತಾಯಿ ಯಶೋದಮ್ಮ, ಮಗಳಿಗಾಗಿ ಗ್ರಾಮದಲ್ಲಿ ಹುಡುಕಿದ್ದಾರೆ. ಆದರೆ ಆಕೆ ಎಲ್ಲೂ ಪತ್ತೆಯಾಗಿರಲಿಲ್ಲ. ಬಳಿಕ ಅವರು ಮಾಗಡಿ ಠಾಣೆಗೆ ದೂರು ನೀಡಿದ್ದರು. 

ಆದರೆ ಇಂದು ಮಧ್ಯಾಹ್ನ 3 ಗಂಟೆಗೆ ಗ್ರಾಮದಿಂದ 1 ಕಿ.ಮೀ. ದೂರದ ದೊಣಕುಪ್ಪೆ ಗ್ರಾಮದ ನಿವೃತ್ತ ಮುಖ್ಯಶಿಕ್ಷಕ ಗಂಗರಾಯಿ ಎಂಬುವವರ ತೋಟದ ಬಾವಿಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ.‌ ಇದೀಗ ಆಕೆಯ ಸಾವು ಸಾಕ ಅನುಮಾನಗಳಿಗೆ ಕಾರಣವಾಗಿದೆ. ಈ ಬಗ್ಗೆ ಮೃತ ಲಕ್ಷ್ಮಿ ತಾಯಿ ಯಶೋದಮ್ಮ ನಾಗೇಶ ಎಂಬಾತನ ಮೇಲೆ ಅನುಮಾನ ವ್ಯಕ್ತಪಡಿಸಿ ಪೊಲೀಸ್ ದೂರು ನೀಡಿದ್ದಾರೆ.

ಹಲವು ತಿಂಗಳ ಹಿಂದೆ ನಾಗೇಶ್ ಎಂಬಾತ ಬಾಲಕಿಯನ್ನು ಪ್ರೀತಿಸುವಂತೆ ಕಿರುಕುಳ ಕೊಡುತ್ತಿದ್ದ. ಈತ ಲಕ್ಷ್ಮಿಯನ್ನು ಹಿಂಸೆ ಕೊಟ್ಟು ಬಾವಿಗೆ ತಳ್ಳಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ